Featured

ಯಾವುದೇ ಕ್ಷಣದಲ್ಲಿ ಸರ್ಕಾರ ಬೀಳಬಹುದು, ಬಿಎಸ್​ವೈ ಸಿಎಂ ಆಗುವುದು ಗ್ಯಾರಂಟಿ : ಡಿವಿಎಸ್​

ಬೆಂಗಳೂರು: ರಾಜ್ಯದ ರಾಜಕಾರಣ ನಿಂತ ನೀರಲ್ಲ. ಸಾಕಷ್ಟು ಮಳೆಯಾಗಿ ಜಲಾಶಯಗಳು ಭರ್ತಿಯಾಗಿ ಕ್ರಸ್ಟ್ ಗೇಟ್ ತೆರೆದು ನೀರು ಹೊರಬಿಡುವಂತೆ ಯಾವುದೇ ಕ್ಷಣದಲ್ಲಿ ಬೇಕಾದರೂ ಸರ್ಕಾರ ಬೀಳಬಹುದು ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಯಾವುದೇ ಕ್ಷಣದಲ್ಲಾದರೂ ಸರ್ಕಾರ ಬೀಳಬಹುದು. ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗಬಹುದು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜನ ಅವರಿಗೆ ಬುದ್ಧಿ ಕಲಿಸುತ್ತಾರೆ‌. ಶೇಕಡಾ 70ರಷ್ಟು ಸ್ಥಾನಗಳು ಬಿಜೆಪಿಗೆ ಸಿಗುತ್ತವೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು. ಸಿದ್ದರಾಮಯ್ಯ ಕಾಲದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹಗರಣಗಳು ಮುಂದುವರೆದಿವೆ. ಮೊದಲು ಅವರು ಒಬ್ಬರೇ ಲೂಟಿ ಮಾಡುತ್ತಿದ್ದರು. ಈಗ ಇಬ್ಬರು ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಇಬ್ಬರು ಕ್ಯಾಪ್ಟನ್​​​​​ಗಳು ಎಂದು ಡಿವಿಎಸ್ ಕಾಂಗ್ರೆಸ್-ಜೆಡಿಎಸ್​​ ಸಮ್ಮಿಶ್ರ ಸರ್ಕಾರದ ವಿರುದ್ಧ​ ಹರಿಹಾಯ್ದರು.

ಇದೇ ವೇಳೆ ಅಕ್ರಮ ಬಾಂಗ್ಲಾ ವಲಸಿಗರು ಬಗ್ಗೆ ಮಾತನಾಡಿದ ಅವರು, ಪಕ್ಕದ ದೇಶಗಳಿಂದ ಬಂದ ದೇಶದ್ರೋಹಿಗಳನ್ನು ನಮ್ಮಲ್ಲಿ ಇರಿಸಿಕೊಳ್ಳಬಾರದು ಎಂಬುದು ಎಲ್ಲಾ ದೇಶಪ್ರೇಮಿಗಳ ಆಶಯ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ನಡೆದ ಸಮೀಕ್ಷೆಯಲ್ಲಿ 41ಲಕ್ಷ ಅಕ್ರಮ ವಲಸಿಗರಿದ್ದಾರೆ. ಬೆಂಗಳೂರಿನಲ್ಲೂ ಸುಮಾರು ಒಂದೂವರೆ ಲಕ್ಷ ಅಕ್ರಮ ಬಾಂಗ್ಲಾ ವಲಸಿಗರಿದ್ದಾರೆ. ಚಿಕ್ಕಮಗಳೂರಿನ ಕಾಫಿ ತೋಟಗಳಲ್ಲೂ ಮೂರ್ನಾಲ್ಕು ಲಕ್ಷ ಅಕ್ರಮ ಬಾಂಗ್ಲಾ ವಲಸಿಗರಿದ್ದಾರೆ ಎಂಬ ಮಾಹಿತಿ ಇದೆ. ಅವರೆಲ್ಲಾ ಅಕ್ರಮ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಯಾವುದೇ ಕಾರಣಕ್ಕೂ ದೇಶದ್ರೋಹಿಗಳನ್ನು ಬಿಡುವುದಿಲ್ಲ ಎಂದು ಹೇಳಿದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

18 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

18 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

18 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

21 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

21 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

21 hours ago