Featured

ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ , ನಮ್ಮ ಷರತ್ತು ಒಪ್ಪಿದವರ ಜೊತೆ ಸರ್ಕಾರ ನಡೆಸುತ್ತೇವೆ : ಹೆಚ್‌.ಡಿ.ಕುಮಾರಸ್ವಾಮಿ – Vishwanews24

ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ , ನಮ್ಮ ಷರತ್ತಿಗೆ ಒಪ್ಪಿಗೆ ಕೊಟ್ಟರೆ ಮಾತ್ರ ದೋಸ್ತಿ : ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಮೂರು ಪಕ್ಷಗಳು ಅಲರ್ಟ್‌ ಆಗಿದ್ದು, ಸರ್ಕಾರ ರಚನೆಗೆ ಪ್ಲಾನ್‌ ನಡೆಸಿವೆ. ಈ ಹೊತ್ತಿನಲ್ಲೇ ಜೆಡಿಎಸ್‌ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಅವರು, ನಾವು ಮೈತ್ರಿಗೆ ಸಿದ್ಧ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಮತದಾನ ನಡೆದ ಬೆನ್ನಲ್ಲೇ ಹೆಚ್‌.ಡಿ.ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಹಾರಿದರು. ವಿದೇಶದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಅಲ್ಲಿಂದಲೇ ರಾಜಕೀಯ ಲೆಕ್ಕಾಚಾರ ಶುರು ಮಾಡಿದ್ದಾರೆ. ಯಾರೊಂದಿಗಾದರೂ ಓಕೆ, ಮೈತ್ರಿಗೆ ಸಿದ್ಧ. ಆದರೆ ಕೆಲವು ಷರತ್ತುಗಳು ಇವೆ ಎಂದು ಆಪ್ತರ ಮೂಲಕ ಹೆಚ್‌ಡಿಕೆ ಖಡಕ್‌ ಸಂದೇಶ ಕೊಟ್ಟಿದ್ದಾರೆ.

ಯಾರೇ ಮೈತ್ರಿಗೆ ಬಂದರೂ, ನಮ್ಮ ಷರತ್ತಿಗೆ ಒಪ್ಪಿಗೆ ಕೊಟ್ಟರೆ ಮಾತ್ರ ದೋಸ್ತಿ. ನಮ್ಮ ಬೇಡಿಕೆ, ನಮ್ಮ ಷರತ್ತು ಒಪ್ಪಿದವರ ಜೊತೆ ಸರ್ಕಾರ ನಡೆಸುತ್ತೇವೆ. ಎರಡು ಬಾರಿಯಾದ ಅವಾಂತರ ಈ ಬಾರಿ ಆಗಬಾರದು. ದೋಸ್ತಿ ಮಾಡಿಕೊಳ್ಳುವ ಮುನ್ನವೇ ಷರತ್ತುಗಳಿಗೆ ಒಪ್ಪಿಕೊಂಡರೆ ನಾವು ಸಿದ್ಧ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕುಮಾರಸ್ವಾಮಿ ಷರತ್ತು
ಸಿಎಂ ಜೊತೆಗೆ ಪ್ರಮುಖ ಖಾತೆಗಳು ನಮಗೆ ನೀಡಬೇಕು. ಜಲಸಂಪನ್ಮೂಲ ಇಲಾಖೆ, ಇಂಧನ, ಲೋಕೋಪಯೋಗಿ ಇಲಾಖೆ ಸೇರಿದಂತೆ ಪ್ರಮುಖ ಖಾತೆಗಳು ಕೊಡಬೇಕು. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಹೈಕಮಾಂಡ್‌ಗಳು ಹಸ್ತಕ್ಷೇಪ ಮಾಡಬಾರದು. ದೋಸ್ತಿ ಸರ್ಕಾರದ ಮಧ್ಯೆ ಯಾವುದೇ ಸಮನ್ವಯ ಸಮಿತಿ ಇರಬಾರದು.

ಯಾವುದೇ ನಿರ್ಧಾರ ತೆಗೆದುಕೊಳ್ಳಲು ಯಾವುದೇ ನಿರ್ಬಂಧ ಹಾಕಬಾರದು. ಸರ್ಕಾರದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ನನಗೆ ಸ್ವತಂತ್ರ ಕೊಡಬೇಕು. ಜೆಡಿಎಸ್ ಕೊಟ್ಟಿರುವ ಪ್ರಣಾಳಿಕೆಗೆ ಯಾವುದೇ ವಿರೋಧ ಮಾಡದೇ ಜಾರಿಗೆ ಒಪ್ಪಿಕೊಳ್ಳಬೇಕು. ಜೆಡಿಎಸ್ ಭದ್ರಕೋಟೆ ಹಳೆ‌ ಮೈಸೂರು ಭಾಗದ ಜಿಲ್ಲೆಗಳ ಮೇಲೆ ಮೈತ್ರಿ ‌ಪಕ್ಷ ಯಾವುದೇ ಹಸ್ತಕ್ಷೇಪ ಮಾಡಬಾರದು ಎಂದು ಮೈತ್ರಿ ಬಯಸಿ ಬರುವ ಪಕ್ಷಕ್ಕೆ ಕುಮಾರಸ್ವಾಮಿ ಷರತ್ತು ಹಾಕಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

14 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

14 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

15 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

16 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

17 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

17 hours ago