ಹಾಸನ: ಆಹಾರ ಇಲಾಖೆಯ ಹೊಸ ಮಾನದಂಡದ ಕಾರಣದಿಂದಾಗಿ ರಾಜ್ಯದ ಅನೇಕ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದಾಗೋ ಭಯ ಪಡಿತರ ಫಲಾನುಭವಿಗಳಲ್ಲಿ ಉಂಟಾಗಿತ್ತು. ಆದ್ರೇ ಯಾವುದೇ ಕಾರ್ಡ್ ರದ್ದು ಮಾಡೋದಿಲ್ಲ ಎಂಬುದಾಗಿ ಆಹಾರ ಮತ್ತು ನಾಗರೀಕ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟ ಪಡಿಸುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.
ಈ ಬಗ್ಗೆ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಯಾರು ಅರ್ಹರಿದ್ದಾರೋ ಅವರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ಪರಿಶೀಲನೆ ಮಾಡಿ, ನೀಡಲಾಗುತ್ತದೆ. ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದು ಮಾಡೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಕೆಲವರಿಗೆ ಬ್ಯಾಂಕ್ ಸಮಸ್ಯೆ ಕಾರಣದಿಂದಾಗಿ ಪಡಿತರ ರದ್ದಾಗಿತ್ತು. ಇದನ್ನು ಸರಿ ಪಡಿಸೋದಕ್ಕಾಗಿ ಅಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನೂ ಮೂರು ತಿಂಗಳಲ್ಲೇ ಹೊಸದಾಗಿ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ವಿತರಣೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ BPL ಪಡಿತರ ಚೀಟಿಗಾಗಿ 3 ಲಕ್ಷ ಅರ್ಜಿಗಳು ಬಂದಿದ್ದವು. ಈ ಅರ್ಜಿಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ, ಅನುಮೋದನೆ ನೀಡಲು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಶೀಘ್ರವೇ ಹೊಸದಾಗಿ ಬಿಪಿಎಲ್, ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದವರ ಅರ್ಜಿಗಳನ್ನು ಪರಿಶೀಲನೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ. ಯಾವುದೇ ಜನರು ಆತಂಕ ಪಡೋ ಅಗತ್ಯವಿಲ್ಲ. ನಿಗದಿತ ಮಾನದಂಡದಂತೆ ಪರಿಶೀಲನೆ ನಡೆಸಿ, ಅರ್ಹರಿಗೆ ಹೊಸದಾಗಿ BPL, APL ಕಾರ್ಡ್ ವಿತರಣೆ ಮಾಡುವುದಾಗಿ ಹೇಳಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…