ಮೈಸೂರು, : ಯಾವುದೇ ವ್ಯಕ್ತಿ ಕೇಂದ್ರಿತ ಅಥವಾ ಪಕ್ಷ ಕೇಂದ್ರಿತ ಚುನಾವಣೆ ಎಂದಿಗೂ ನಡೆಯಬಾರದು. ವಿಚಾರಗಳ ವಿನಿಮಯದ ಮೇಲೆ ಚುನಾವಣೆ ನಡೆಯಬೇಕು ಎಂದು ಚಿತ್ರ ನಟ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಬಂದು ದೇಶವನ್ನು ಹೀಗೆ ಮಾಡುತ್ತೇನೆ, ಹಾಗೆ ಮಾಡುತ್ತೇನೆ ಎಂದರೆ ನಾವು ಓಟು ಹಾಕುತ್ತೇವೆ. ಯಾವ ರೀತಿ ಮಾಡುತ್ತೀರ ಎಂದು ಮರುಪ್ರಶ್ನೆಯನ್ನೂ ಕೇಳುವುದಿಲ್ಲ. ಮುಂದಿನ ದಿನಗಳಲ್ಲಿ, ವಿಚಾರಗಳನ್ನು ವಿಮರ್ಶಿಸಿ ಚುನಾವಣೆ ನಡೆಸುವ ಕಾಲ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
37 ಸ್ಥಾನ ಪಡೆದ ಪಕ್ಷ ಮೈತ್ರಿ ಮಾಡಿಕೊಂಡು ಸಂವಿಧಾನ ಬದ್ಧವಾಗಿಯೇ ಬಹುಮತ ಸ್ಪಷ್ಟಪಡಿಸಿ ಅಧಿಕಾರದ ಗದ್ದುಗೆ ಏರಿದೆ. ಇದರಲ್ಲಿ ತಪ್ಪೇನೂ ಇಲ್ಲ. ಕೆಲಸಗಳ ಬಗ್ಗೆ ಜನ ಹಾಗೂ ಮಾಧ್ಯಮಗಳು ಮಾತನಾಡಬೇಕು ಎಂದರು.
ಈ ಹಿಂದಿನ ಹಾಗೂ ಪ್ರಸ್ತುತ ಆಡಳಿತ ನಡೆಸುತ್ತಿರುವ ರಾಜಕೀಯ ಪಕ್ಷಗಳ ಕೆಲಸಗಳು ತೃಪ್ತಿ ನೀಡದ ಹಿನ್ನೆಲೆಯಲ್ಲಿ ಪ್ರಜಾಕೀಯ ಪಕ್ಷ ಸ್ಥಾಪನೆ ಮಾಡಲಾಗಿದೆ. ಸರ್ಕಾರ ಬೀಳಲಿದೆ ಎಂದು ಹೇಳುವುದಕ್ಕೆ ನಾನು ಜ್ಯೋತಿಷ್ಯ ಓದಿಲ್ಲ. ಸುಮಲತಾ ಅವರಿಗೆ ಒಂದು ಸಿದ್ಧಾಂತವಿದೆ. ಹಾಗಾಗಿ ಚುನಾವಣೆಯಲ್ಲಿ ಗೆದ್ದರು. ಆದ್ದರಿಂದ ನನಗೂ ಅವರಿಗೂ ಹೋಲಿಕೆ ಮಾಡಬಾರದು. ವೈಯಕ್ತಿಕ ಧ್ಯೇಯೋದ್ದೇಶಗಳನ್ನು ಈಗಾಗಲೇ ನನ್ನ ಸಿನಿಮಾಗಳಲ್ಲಿ ತೋರಿಸಿದ್ದೇನೆ.ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…