Featured

ಯಾವುದೇ ವ್ಯಕ್ತಿ ಕೇಂದ್ರಿತ ಅಥವಾ ಪಕ್ಷ ಕೇಂದ್ರಿತ ಚುನಾವಣೆ ಎಂದಿಗೂ ನಡೆಯಬಾರದು. ವಿಚಾರಗಳ ವಿನಿಮಯದ ಮೇಲೆ ಚುನಾವಣೆ ನಡೆಯಬೇಕು : ಚಿತ್ರ ನಟ ಉಪೇಂದ್ರ -Vishwanews24

ಮೈಸೂರು, : ಯಾವುದೇ ವ್ಯಕ್ತಿ ಕೇಂದ್ರಿತ ಅಥವಾ ಪಕ್ಷ ಕೇಂದ್ರಿತ ಚುನಾವಣೆ ಎಂದಿಗೂ ನಡೆಯಬಾರದು. ವಿಚಾರಗಳ ವಿನಿಮಯದ ಮೇಲೆ ಚುನಾವಣೆ ನಡೆಯಬೇಕು ಎಂದು ಚಿತ್ರ ನಟ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಬಂದು ದೇಶವನ್ನು ಹೀಗೆ ಮಾಡುತ್ತೇನೆ, ಹಾಗೆ ಮಾಡುತ್ತೇನೆ ಎಂದರೆ ನಾವು ಓಟು ಹಾಕುತ್ತೇವೆ. ಯಾವ ರೀತಿ ಮಾಡುತ್ತೀರ ಎಂದು ಮರುಪ್ರಶ್ನೆಯನ್ನೂ ಕೇಳುವುದಿಲ್ಲ. ಮುಂದಿನ ದಿನಗಳಲ್ಲಿ, ವಿಚಾರಗಳನ್ನು ವಿಮರ್ಶಿಸಿ ಚುನಾವಣೆ ನಡೆಸುವ ಕಾಲ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

37 ಸ್ಥಾನ ಪಡೆದ ಪಕ್ಷ ಮೈತ್ರಿ ಮಾಡಿಕೊಂಡು ಸಂವಿಧಾನ ಬದ್ಧವಾಗಿಯೇ ಬಹುಮತ ಸ್ಪಷ್ಟಪಡಿಸಿ ಅಧಿಕಾರದ ಗದ್ದುಗೆ ಏರಿದೆ. ಇದರಲ್ಲಿ ತಪ್ಪೇನೂ ಇಲ್ಲ. ಕೆಲಸಗಳ ಬಗ್ಗೆ ಜನ ಹಾಗೂ ಮಾಧ್ಯಮಗಳು ಮಾತನಾಡಬೇಕು ಎಂದರು.

ಈ ಹಿಂದಿನ ಹಾಗೂ ಪ್ರಸ್ತುತ ಆಡಳಿತ ನಡೆಸುತ್ತಿರುವ ರಾಜಕೀಯ ಪಕ್ಷಗಳ ಕೆಲಸಗಳು ತೃಪ್ತಿ ನೀಡದ ಹಿನ್ನೆಲೆಯಲ್ಲಿ ಪ್ರಜಾಕೀಯ ಪಕ್ಷ ಸ್ಥಾಪನೆ ಮಾಡಲಾಗಿದೆ. ಸರ್ಕಾರ ಬೀಳಲಿದೆ ಎಂದು ಹೇಳುವುದಕ್ಕೆ ನಾನು ಜ್ಯೋತಿಷ್ಯ ಓದಿಲ್ಲ. ಸುಮಲತಾ ಅವರಿಗೆ ಒಂದು ಸಿದ್ಧಾಂತವಿದೆ. ಹಾಗಾಗಿ ಚುನಾವಣೆಯಲ್ಲಿ ಗೆದ್ದರು. ಆದ್ದರಿಂದ ನನಗೂ ಅವರಿಗೂ ಹೋಲಿಕೆ ಮಾಡಬಾರದು. ವೈಯಕ್ತಿಕ ಧ್ಯೇಯೋದ್ದೇಶಗಳನ್ನು ಈಗಾಗಲೇ ನನ್ನ ಸಿನಿಮಾಗಳಲ್ಲಿ ತೋರಿಸಿದ್ದೇನೆ.ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago