Featured

ಯಾವುದೇ ಹೇಳಿಕೆಗಳಿಂದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿಲ್ಲ..: ಬಿ.ವೈ. ವಿಜಯೇಂದ್ರ -Vishwanews24

ಯಾವುದೇ ಹೇಳಿಕೆಗಳಿಂದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿಲ್ಲ..: ಬಿ.ವೈ. ವಿಜಯೇಂದ್ರ -Vishwanews24

ಜನಪರ ಕೆಲಸ ಮಾಡುವ ಮೂಲಕ ಸಂಘಟನೆ ಮಾಡಬೇಕು..

ಶಿವಮೊಗ್ಗ: ಯಾವುದೇ ಹೇಳಿಕೆಗಳಿಂದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿಲ್ಲ. ಅದರ ಬದಲು ಜನಪರ ಕೆಲಸ ಮಾಡುವ ಮೂಲಕ ಸಂಘಟನೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಎರಡು ಪೆಗ್ ಬೇಕು ಎಂಬ ಹೇಳಿಕೆಗಳಿಗೆ ತಿರುಗೇಟು ನೀಡಿದರು.

ಬಹಳಷ್ಟು ಜನ ಎಲುಬಿಲ್ಲದ ನಾಲಿಗೆ ರೀತಿ ವರ್ತಿಸುತ್ತಿದ್ದಾರೆ. ಇದನ್ನು ನಾವೆಲ್ಲರೂ ಗಮನಿಸುತ್ತಿದ್ದೇವೆ. ಹೇಳಿಕೆಗಳನ್ನು ಕೊಡುವುದರ ಮೂಲಕ ನಾಯಕತ್ವ ಬೆಳೆದುಬಿಡುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ವಾಜಪೇಯಿಯಂತಹ ನಾಯಕರ ಬಗ್ಗೆ ಮಾತನಾಡುವುದು, ಯಾವುದೇ ಪಕ್ಷದವರಿಗೆ ಶೋಭೆ ತರುವುದಿಲ್ಲ ಎಂದರು.

ವರಿಷ್ಠರು ನಿರ್ಧರಿಸುತ್ತಾರೆ: ಯಡಿಯೂರಪ್ಪ ಅವರು ಹಿಂದೆ ರಾಜ್ಯದಲ್ಲಿ ಹೋರಾಟ ಮಾಡಿದ್ದರು. ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು, ಮಂತ್ರಿಯಾಗಬೇಕು, ಮುಖ್ಯಮಂತ್ರಿಯಾಗಬೇಕೆಂ ಉದ್ದೇಶವಿಟ್ಟುಕೊಂಡು ಹೋರಾಟ ಮಾಡಲಿಲ್ಲ. ರಾಘವೇಂದ್ರ ಅವರಾಗಲಿ, ನಾನಾಗಲಿ ಯಾವುದೇ ಸ್ಥಾನ ಗುರುತಿಸಿಕೊಂಡು ಕೆಲಸ ಮಾಡ್ತಿಲ್ಲ. ಮಾಡುತ್ತಿರುವ ಕೆಲಸವನ್ನು ಜನ ಗುರುತಿಸಬೇಕು. ನಾವಾಗಿಯೇ ಮಂತ್ರಿಯಾಗಬೇಕು, ಪಕ್ಷದ ರಾಜ್ಯಾಧ್ಯಕ್ಷ ಆಗಬೇಕು ಎನ್ನುವಂತಹ ಪ್ರಶ್ನೆ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಯಾವುದೇ ಪ್ರಾದೇಶಿಕ ಪಕ್ಷವಲ್ಲ. ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ಇದ್ದಾರೆ. ಯಾವಾಗ ಯಾವ ಸ್ಥಾನಮಾನ ಕೊಡಬೇಕು ಎಂಬುದನ್ನ ಪಕ್ಷದ ಮುಖಂಡರು ತೀರ್ಮಾನ ಮಾಡುತ್ತಾರೆ ಎಂದು ವಿಜಯೇಂದ್ರ ಹೇಳಿದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago