Featured

ಯಾವ ಕಾರಣಕ್ಕೂ ಅಧ್ಯಕ್ಷನಾಗಿ ಮುಂದುವರಿಯುವುದಿಲ್ಲ ; ಅಧ್ಯಕ್ಷ ಪದವಿಗೆ ಸೂಕ್ತ ವ್ಯಕ್ತಿಯನ್ನು ಹುಡುಕಿ : ರಾಹುಲ್ ಗಾಂಧಿ -Vishwanews24

ನವದೆಹಲಿ: ಲೋಕಸಮರದಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದಾರೆ. ಆದರೆ ಪಕ್ಷದ ಹಿರಿಯ ನಾಯಕರು ರಾಹುಲ್ ನಿರ್ಧಾರವನ್ನಿನ್ನೂ ಅನುಮೋದಿಸಿಲ್ಲ. ಆದರೆ ರಾಹುಲ್ ಮಾತ್ರ ತಾವು ಹಿಡಿದ ಪಟ್ಟು ಬಿಡುತ್ತಿಲ್ಲ. ಆದಷ್ಟು ಶೀಘ್ರ ಅಧ್ಯಕ್ಷ ಪದವಿಗೆ ಸೂಕ್ತ ವ್ಯಕ್ತಿಯನ್ನು ಹುಡುಕಿ ಎಂದು ಅವರು ಕೈ ನಾಯಕರಿಗೆ ಸೂಚಿಸಿದ್ದಾರೆ.
ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿರುವ ರಾಹುಲ್ ಗಾಂಧಿ ತಾವು ಯಾವ ಕಾರಣಕ್ಕೂ ಅಧ್ಯಕ್ಷರಾಗಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಲ್ಲದೆ ಪಕ್ಷದ ಪುನರುಜ್ಜೀವನಕ್ಕಾಗಿ ಗಾಂಧಿ-ನೆಹರು ಕುಟುಂಬ ಹೊರತಾದ ನಾಯಕತ್ವವನ್ನು ಹುಡುಕಬೇಕೆಂದು ಒತ್ತಾಯಿಸಿದ್ದಾರೆ.
ರಾಹುಲ್ ಗಾಂಧಿಯವರ ಪ್ರಸ್ತಾಪದ ನಂತರ ಕಾಂಗ್ರೆಸ್ ನಾಯಕತ್ವದ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದೆ.
ಪಕ್ಷದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವಿರುವ ಸಿಡಬ್ಲ್ಯುಸಿ ಸಭೆಯಲ್ಲಿ ಪಕ್ಷಕ್ಕೆ ಅಗತ್ಯವಿರುವ ರಚನಾತ್ಮಕ ಸುಧಾರಣೆಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ತೀರ್ಮಾನ ಮಾಡುವ ಸಾಧ್ಯತೆ ಇದೆ.
ಈಗಿನ ಬಿಕ್ಕಟ್ಟನ್ನು ಹೇಗೆ ಪರಿಹರಿಸಬೇಕುಕು ಮತ್ತು ಪಕ್ಷವನ್ನು ಪುನರ್ ಸಂಘಟಿಸುವುದು ಹೇಗೆ ಎಂಬುದರ ಬಗ್ಗೆ ಹಲವಾರು ಸಲಹೆಗಳು ಬಂದಿದೆ.ಅಧ್ಯಕ್ಷೀಯ ವ್ಯವಸ್ಥೆಯ ಬಗ್ಗೆ ಪಕ್ಷದ ವಲಯಗಳಲ್ಲಿ ಒಂದು ಚರ್ಚೆ ಇದಾಗಲೇ ನಡೆದಿದ್ದು ಒಬ್ಬರ ಅಧ್ಯಕ್ಷತೆ ಅಥವಾ ಒಂದು ಅಧ್ಯಕ್ಷೀಯ ಸಮಿತಿಯ ರಚನೆ ಇಲ್ಲವೇ ಒಂದು ಮಂಡಳಿಯ ರಚನೆ ಆಗಬೇಕೆ ಎಂಬ ಬಗ್ಗೆ ತೀರ್ಮಾನಿಸಬೇಕಿದೆ.ಮುಂದಿನ ಸಿಡಬ್ಲ್ಯುಸಿ ಸಭೆಯು ಪಕ್ಷವು ಏಕವ್ಯಕ್ತಿಯ ಅಧ್ಯಕ್ಷ ಸ್ಥಾನ ಹೊಂದಬೇಕೆ ಅಥವಾ ಸಮಿತಿ, ಮಂಡಳಿಯ ರಚನೆ ಅನಿವಾರ್ಯವೇ ಎಂಬುದನ್ನು ತೀರ್ಮಾನಿಸಲಿದೆ.
ಇದೀಗ ಮುಂದಿನ ಕಾಂಗ್ರೆಸ್ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.
Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago