ಬೆಂಗಳೂರು: ಯಾವ ಪವರ್ ಇಲ್ಲ, ಯಾವ ಶೇರಿಂಗ್ ಇಲ್ಲ. ಐದು ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.
ಜಾತಿ ಗಣತಿಗೆ ಪ್ರಬಲ ಸಮುದಾಯಗಳ ವಿರೋಧ ವಿಚಾರವಾಗಿ ಮಾತನಾಡಿ, ಯಾವ ಸಭೆಯೂ ಇಲ್ಲ, ನನಗೆ ತಿಳಿದಂತೆ ಯಾವ ಸಭೆಯೂ ಇಲ್ಲ. ಸಿಎಂ ಕ್ಯಾಬಿನೆಟ್ ಸಭೆಗೆ ತರ್ತೀನಿ ಅಂತ ಹೇಳಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಯಾಗಲಿದೆ ಎಂದರು.
ನಾನು, ಸಿಎಂ ಸಭೆ ಕರೆದಿದ್ದೇವೆ. ಎಲ್ಲಾ ಸಭೆ ರದ್ದು ಮಾಡಿ ಸಂಜೆ ಪದಾಧಿಕಾರಿಗಳ ಇತರೆ ಸಭೆ ಇದೆ. ಸುರ್ಜೇವಾಲ ಬರ್ತಾರೆ, ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ. ಎಂಎಲ್ಎ, ಮಂತ್ರಿಗಳಿಗೆ ಜವಾಬ್ದಾರಿ ಕೊಡಬೇಕಿದೆ. ಸಿಎಂ, ನಾನು ದೆಹಲಿಗೆ ಹೋಗ್ತಿದ್ದೇವೆ. ದೆಹಲಿಯಲ್ಲಿ ಹೊಸ ಕಟ್ಟಡ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದೇವೆ ಎಂದರು.
ಎಲ್ಲಾ ಇಲಾಖೆಯಲ್ಲಿ ರೇಟ್ ಕಾರ್ಡ್ ಫಿಕ್ಸ್ ಮಾಡಿದ್ದಾರೆ ಅಂತ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ಹೌದಾ.? ಅವರ ರೇಟ್ ಕಾರ್ಡಾ? ಅವರ ಕಾರ್ಡ್ ಫಿಕ್ಸ್ ಇರಬೇಕು. ಅವರ ಅನುಭವ ಮಾತಾಡ್ತಿದ್ದಾರೆ, ನನಗೆ ಗೊತ್ತಿಲ್ಲ. ಅದ್ಯಾವ್ದೋ ಪೂಜೆದೆಲ್ಲಾ ಹೇಳಿದ್ದಾರೆ ಅಲ್ವಾ? ಅದು ಅವರ ಅನುಭವ. ಅವರು ಕದ್ದು ಮಾಡ್ತಾರೆ, ನಾನು ಓಪನ್ ಆಗಿ ಮಾಡ್ತೀನಿ. ಅವರು ಕದ್ದು ಪೂಜೆ ಮಾಡ್ತಾರೆ. ನಾನು ಓಪನ್ ಆಗಿ ದಿನಾ ಬೆಳಗ್ಗೆ ಪೂಜೆ ಮಾಡ್ತೀನಿ. ನಾನು ಹಿಂದೆ ಮುಂದೆ ಮಾಡಲ್ಲ. ನಿಮ್ಮಂತವರು ತೊಂದರೆ ಕೊಡ್ತಾರೆ. ರಕ್ಷಣೆ ಕೊಡಪ್ಪಾ ಅಂತ ಮನವಿ ಮಾಡ್ತೀನಿ ಎಂದು ಟಾಂಗ್ ಕೊಟ್ಟರು.
ವಿನಯ್ ಗುರೂಜಿ ಭವಿಷ್ಯ ಬಗ್ಗೆ ಮಾತನಾಡಿ, ನಾನು ಎಲ್ಲಾ ಸ್ವಾಮೀಜಿ, ಗುರೂಜಿಗಳಿಗೆ ವಿನಂತಿ ಮಾಡ್ತೀನಿ. ನಮ್ಮ ಸರ್ಕಾರದ ವಿಚಾರದಲ್ಲಿ ತಮ್ಮ ಯಾವ ಹೇಳಿಕೆ ಬೇಡ. ನಮ್ಮ ಸರ್ಕಾರ ಸುಭದ್ರವಾಗಿ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಕೆಲಸ ಮಾಡ್ತಿದ್ದಾರೆ. ಅವರ ನೇತೃತ್ವದಲ್ಲಿ ನಾವೆಲ್ಲ ಒಟ್ಟಿಗೆ ಕೆಲಸ ಮಾಡ್ತಿದ್ದೇವೆ. ಯಾರೂ ಭವಿಷ್ಯ ನುಡಿಯೋದು ಬೇಕಿಲ್ಲ ಎಂದು ಮನವಿ ಮಾಡಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…