Featured

ಯಾವ ಪವರ್ ಇಲ್ಲ, ಯಾವ ಶೇರಿಂಗ್ ಇಲ್ಲ,  ಐದು ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ : ಡಿ.ಕೆ.ಶಿವಕುಮಾರ್ – vishwanews24

ನಮ್ಮ ಸರ್ಕಾರದ ವಿಚಾರದಲ್ಲಿ ಯಾರೂ ಭವಿಷ್ಯ ನುಡಿಯೋದು ಬೇಡ : ಡಿಸಿಎಂ ವಿನಂತಿ

ಬೆಂಗಳೂರು: ಯಾವ ಪವರ್ ಇಲ್ಲ, ಯಾವ ಶೇರಿಂಗ್ ಇಲ್ಲ. ಐದು ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಜಾತಿ ಗಣತಿಗೆ ಪ್ರಬಲ ಸಮುದಾಯಗಳ ವಿರೋಧ ವಿಚಾರವಾಗಿ ಮಾತನಾಡಿ, ಯಾವ ಸಭೆಯೂ ಇಲ್ಲ, ನನಗೆ ತಿಳಿದಂತೆ ಯಾವ ಸಭೆಯೂ ಇಲ್ಲ. ಸಿಎಂ ಕ್ಯಾಬಿನೆಟ್ ಸಭೆಗೆ ತರ್ತೀನಿ ಅಂತ ಹೇಳಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಯಾಗಲಿದೆ ಎಂದರು.

ನಾನು, ಸಿಎಂ ಸಭೆ ಕರೆದಿದ್ದೇವೆ. ಎಲ್ಲಾ ಸಭೆ ರದ್ದು ಮಾಡಿ ಸಂಜೆ ಪದಾಧಿಕಾರಿಗಳ ಇತರೆ ಸಭೆ ಇದೆ. ಸುರ್ಜೇವಾಲ ಬರ್ತಾರೆ, ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ. ಎಂಎಲ್‌ಎ, ಮಂತ್ರಿಗಳಿಗೆ ಜವಾಬ್ದಾರಿ ಕೊಡಬೇಕಿದೆ.  ಸಿಎಂ, ನಾನು ದೆಹಲಿಗೆ ಹೋಗ್ತಿದ್ದೇವೆ. ದೆಹಲಿಯಲ್ಲಿ ಹೊಸ ಕಟ್ಟಡ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದೇವೆ ಎಂದರು.

ಎಲ್ಲಾ ಇಲಾಖೆಯಲ್ಲಿ ರೇಟ್ ಕಾರ್ಡ್ ಫಿಕ್ಸ್ ಮಾಡಿದ್ದಾರೆ ಅಂತ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ಹೌದಾ.? ಅವರ ರೇಟ್ ಕಾರ್ಡಾ? ಅವರ ಕಾರ್ಡ್ ಫಿಕ್ಸ್ ಇರಬೇಕು. ಅವರ ಅನುಭವ ಮಾತಾಡ್ತಿದ್ದಾರೆ, ನನಗೆ ಗೊತ್ತಿಲ್ಲ. ಅದ್ಯಾವ್ದೋ ಪೂಜೆದೆಲ್ಲಾ ಹೇಳಿದ್ದಾರೆ ಅಲ್ವಾ? ಅದು ಅವರ ಅನುಭವ. ಅವರು ಕದ್ದು ಮಾಡ್ತಾರೆ, ನಾನು ಓಪನ್ ಆಗಿ ಮಾಡ್ತೀನಿ. ಅವರು ಕದ್ದು ಪೂಜೆ ಮಾಡ್ತಾರೆ. ನಾನು ಓಪನ್ ಆಗಿ ದಿನಾ ಬೆಳಗ್ಗೆ ಪೂಜೆ ಮಾಡ್ತೀನಿ. ನಾನು ಹಿಂದೆ ಮುಂದೆ ಮಾಡಲ್ಲ. ನಿಮ್ಮಂತವರು ತೊಂದರೆ ಕೊಡ್ತಾರೆ. ರಕ್ಷಣೆ ಕೊಡಪ್ಪಾ ಅಂತ ಮನವಿ ಮಾಡ್ತೀನಿ ಎಂದು ಟಾಂಗ್ ಕೊಟ್ಟರು.

ವಿನಯ್ ಗುರೂಜಿ ಭವಿಷ್ಯ ಬಗ್ಗೆ ಮಾತನಾಡಿ, ನಾನು ಎಲ್ಲಾ ಸ್ವಾಮೀಜಿ, ಗುರೂಜಿಗಳಿಗೆ ವಿನಂತಿ ಮಾಡ್ತೀನಿ. ನಮ್ಮ ಸರ್ಕಾರದ ವಿಚಾರದಲ್ಲಿ ತಮ್ಮ ಯಾವ ಹೇಳಿಕೆ ಬೇಡ. ನಮ್ಮ ಸರ್ಕಾರ ಸುಭದ್ರವಾಗಿ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಕೆಲಸ ಮಾಡ್ತಿದ್ದಾರೆ. ಅವರ ನೇತೃತ್ವದಲ್ಲಿ ನಾವೆಲ್ಲ ಒಟ್ಟಿಗೆ ಕೆಲಸ ಮಾಡ್ತಿದ್ದೇವೆ. ಯಾರೂ ಭವಿಷ್ಯ ನುಡಿಯೋದು ಬೇಕಿಲ್ಲ ಎಂದು ಮನವಿ ಮಾಡಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

15 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

15 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

15 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

18 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

18 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

18 hours ago