Featured

ಯಾವ ಪ್ರತಿಭಟನೆ ಮಾಡುವಂತಿಲ್ಲ, ಪ್ರತಿಭಟನೆ ನಡೆಸಿದ್ರೆ ಬಂಧಿಸುತ್ತೇವೆ : ಕಮಲ್ ಪಂಥ್ ಎಚ್ಚರಿಕೆ -Vishwanews24

ಯಾವ ಪ್ರತಿಭಟನೆ ಮಾಡುವಂತಿಲ್ಲ, ಪ್ರತಿಭಟನೆ ನಡೆಸಿದ್ರೆ ಬಂಧಿಸುತ್ತೇವೆ : ಕಮಲ್ ಪಂಥ್ ಎಚ್ಚರಿಕೆ -Vishwanews24

ಬೆಂಗಳೂರು: ಯಾರಾದರೂ ಚೇಷ್ಟೆ ಮಾಡಿದರೆ ಅವರನ್ನು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಸಿದ್ದಾರೆ.

ನಾಳೆಯಿಂದ ಸಾರಿಗೆ ನೌಕರರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಪ್ರೋಟೋಕಾಲ್ ಜಾರಿಯಲ್ಲಿದೆ. ಯಾವ ಪ್ರತಿಭಟನೆ ಮಾಡುವಂತಿಲ್ಲ. ಪ್ರತಿಭಟನೆ ನಡೆಸಿದ್ರೆ ಬಂಧಿಸುತ್ತೇವೆ ಎಂದು ವಾರ್ನ್ ಮಾಡಿದ್ದಾರೆ.

ಎಲ್ಲ ಬಂದೋಬಸ್ತ್‍ಗೂ ನಾವು ತಯಾರಾಗಿದ್ದೀವಿ. ಯಾರಾದ್ರೂ ಚೇಷ್ಟೆ ಮಾಡಿದ್ರೆ ಅವರನ್ನ ಯಾವುದೇ ಕಾರಣಕ್ಕೂ ಬಿಡಲ್ಲ. ಕರ್ತವ್ಯಕ್ಕೆ ಹಾಜರಾಗುವವರಿಗೆ ಆರ್ಮ್ ಎಸ್ಕಾರ್ಟ್ ನಲ್ಲಿ ಭದ್ರತೆ ಕೊಡ್ತೀವಿ. ಡ್ಯೂಟಿಗೆ ಬರೋದು ಬಿಡೊದು ಅವರ ಡಿಪಾರ್ಟ್ಮೆಂಟ್ ಗೆ ಸಂಬಂಧಿಸಿದ್ದು ಎಂದು ಅವರು ತಿಳಿಸಿದ್ದಾರೆ.

ರಸ್ತೆಗಿಳಿದು ಕಲ್ಲು ತೂರಾಟ ರಸ್ತೆ ತಡೆ ಮಾಡಿದ್ರೆ ಅದಕ್ಕೆ ತಕ್ಕ ಶಾಸ್ತಿ ಮಾಡ್ತೀವಿ. 21 ನೇ ತಾರೀಕಿನವರೆಗೇ ಕೋವಿಡ್ ಪ್ರೋಟೋಕಾಲ್ ಇದೆ. ಈಗಾಗಲೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆದಿದೆ. ನಾಳೆ ಬಸ್ ಇಲ್ಲದಿದ್ದರೆ ಖಾಸಗಿಯವರು ಸಹಕಾರ ನೀಡಿದ್ರೆ ಅವರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದಾಗಿ ಕಮಲ್ ಪಂಥ್ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಮತ್ತೆ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ! Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

27 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

37 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

56 minutes ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 hour ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago