ಯುಎಇ ಅಧ್ಯಕ್ಷ ಶೇಖ್ ಖಲೀಫಾ ನಿಧನ : ಇಂದು ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ -Vishwanews24
ಯುಎಇ ಅಧ್ಯಕ್ಷ ಶೇಖ್ ಖಲೀಫಾ ನಿಧನ : ಇಂದು ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ
ಬೆಂಗಳೂರು: ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅವರು ನಿನ್ನೆ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ದೇಶಾದ್ಯಂತ ಇಂದು ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಅಗಲಿದ ಗಣ್ಯರ ಗೌರವಾರ್ಥ ಇಂದು ಒಂದು ದಿನ ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಅಪರ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದು, ಯುಎಇ ಅಧ್ಯಕ್ಷ ಖಲೀಫಾ ಬಿನ್ ಜಾಯೆದ್ ಅವರು ದಿನಾಂಕ 13-05-2022ರಂದು ನಿಧನಹೊಂದಿರುತ್ತಾರೆ. ಅಗಲಿದ ಗಣ್ಯರ ಗೌರವಾರ್ಥವಾಗಿ ದಿನಾಂಕ 14-05-2022ರಂದು ಒಂದು ದಿನ ದೇಶಾದ್ಯಂತ ಶೋಕಾಚರಣೆ ಆಚಿರಸಲು ಭಾರತ ಸರ್ಕಾರವು ನಿರ್ಧರಿಸಿದೆ.
ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ದಿನಾಂಕ 14-05-2022ರಂದು ಒಂದು ದಿನದ ಶೋಕಾಚರಣೆಯನ್ನು ಆಚಿರಸಲಾಗುವುದು. ಈ ದಿನದಂದು ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲು ಸೂಚಿಸಿದ್ದಾರೆ.
ಉಡುಪಿ : ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಾಲಾ ಸೀತಾರಾಮನ್ – Vishwanews24
