Featured

ಯುಕೋ ಬ್ಯಾಂಕ್ ಖಾತೆದಾರರಿಗೆ 820 ಕೋಟಿ ಹಣ ವರ್ಗಾವಣೆ : ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಸಿಬಿಐ ಶೋಧ – vishwanews24

ಯುಕೋ ಬ್ಯಾಂಕ್ ಖಾತೆದಾರರಿಗೆ 820 ಕೋಟಿ ಹಣ ವರ್ಗಾವಣೆ : ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಸಿಬಿಐ ಶೋಧ

ಮಂಗಳೂರು : ದೇಶದ ಬ್ಯಾಂಕ್ ಗಳಲ್ಲಿ ಒಂದಾದ ಯುಕೊ ಬ್ಯಾಂಕ್ 41 ಸಾವಿರಕ್ಕೂ ಅಧಿಕ ಖಾತೆದಾರರ ಖಾತೆಗೆ ಸುಮಾರು 820 ಕೋಟಿ ರೂಪಾಯಿ ತಾಂತ್ರಿಕ ದೋಷದಿಂದ ಜಮೆಯಾಗಿದೆ ಎಂದು ಬ್ಯಾಂಕ್ ತಿಳಿಸಿದ್ದು, ಈ ಸಂಬಂಧ ಸಿಬಿಐ ಎಫ್ಐಆರ್ ದಾಖಲಿಸಿದ್ದು, ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಶೋಧ ನಡೆಸಿದೆ.

ಈ ಕುರಿತು ಯುಕೊ ಬ್ಯಾಂಕ್, ಸಂಶಯಾಸ್ಪದ ಐಎಂಪಿಎಸ್ ವ್ಯವಹಾರಗಳಿಗೆ ಸಂಬಂಧಿಸಿ ತನ್ನೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಎಂಜಿನಿಯರ್ ಹಾಗೂ ಇತರ ಕೆಲ ಅಪರಿಚಿತರ ವಿರುದ್ಧ ದೂರು ನೀಡಿದೆ. ಈ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನ. 10 ಹಾಗೂ 13ರ ಮಧ್ಯೆ 820 ಕೋಟಿ ರೂ. ಮೊತ್ತವನ್ನು ಏಳು ಖಾಸಗಿ ಬ್ಯಾಂಕ್‌ಗಳ 14,000 ಖಾತೆದಾರರಿಂದ ಐಎಂಪಿಎಸ್‌ ಆಂತರಿಕ ವಹಿವಾಟುಗಳ ಮೂಲಕ ಯುಕೋ ಬ್ಯಾಂಕ್‌ನ 41,000 ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

ಹುಡುಕಾಟದ ಸಮಯದಲ್ಲಿ, ಮೊಬೈಲ್‌ ಫೋನ್‌ಗಳು, ಲ್ಯಾಪ್‌ಟಾಪ್‌ಗ್ಳು, ಕಂಪ್ಯೂಟರ್‌ ಸಿಸ್ಟಮ್‌ಗಳು, ಇಮೇಲ್‌ ಆಕ್ರೈವ್‌ಗಳು ಮತ್ತು ಡೆಬಿಟ್‌/ಕ್ರೆಡಿಟ್‌ ಕಾರ್ಡ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್‌ ಪುರಾವೆಗಳನ್ನು ಪಡೆಯಲಾಗಿದೆ.

ಅಚಾನಕ್‌ ಆಗಿ ಖಾತೆಗೆ ಹಣ ಬಿದ್ದ ಕೂಡಲೇ ಕೆಲವರು ವಿತ್‌ಡ್ರಾ ಕೂಡ ಮಾಡಿಕೊಂಡಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago