Featured

ಯುದ್ಧ ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ, ಭಾರತದೊಂದಿಗೆ ಎಂದಿಗೂ ಮೊದಲು ಯುದ್ದ ಆರಂಭಿಸುವುದಿಲ್ಲ : ಪಾಕ್ ಪ್ರಧಾನಿ ಇಮ್ರಾನ್ ಖಾನ್ -Vishwanews24

ಲಾಹೋರ್: ಕಾಶ್ಮೀರ ಜನತೆಗಾಗಿ ಎಲ್ಲದಕ್ಕೂ ಸಿದ್ಧ ಎನ್ನುತ್ತಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಚ್ಚರಿ ಮಾತುಗಳಾಡಿದ್ದಾರೆ. ಅದೇನಂದ್ರೆ ಪಾಕಿಸ್ತಾನ ಮೊದಲು ಅಣ್ವಸ್ತ್ರ ಬಳಸುವುದಿಲ್ಲವಂತೆ ಮತ್ತು ಭಾರತದೊಂದಿಗೆ ತಾನಾಗಿಯೇ ಮೊದಲು ಯುದ್ದ ಆರಂಭಿಸುವುದಿಲ್ಲವಂತೆ.

“ಭಾರತ ಮತ್ತು ಪಾಕಿಸ್ತಾನ ಎರಡೂ ಅಣ್ವಸ್ತ್ರ ರಾಷ್ಟ್ರಗಳಾಗಿದ್ದು, ಎರಡೂ ರಾಷ್ಟ್ರಗಳ ನಡುವೆ ಉದ್ವಿಗ್ನತೆ ತೀವ್ರಗೊಂಡಲ್ಲಿ ಜಗತ್ತು ತೀವ್ರ ಅಪಾಯ ಎದುರಿಸಲಿದೆ. ನಾವು ಎಂದಿಗೂ ಮೊದಲು ಅಣ್ವಸ್ತ್ರಗಳನ್ನು ಬಳಸುವುದಿಲ್ಲ” ಎಂದು ಸೋಮವಾರ ಲಾಹೋರ್​ನಲ್ಲಿ ನಡೆದ ಅಂತಾರಾಷ್ಟ್ರೀಯ ಸಿಖ್ ಸಮಾವೇಶದಲ್ಲಿ ಹೇಳಿದ್ದಾರೆ.

ಪಾಕಿಸ್ತಾನವು ಭಾರತದ ಮೇಲೆ ಮೊದಲು ನ್ಯೂಕ್ಲಿಯರ್ ಬಾಂಬ್ ಹಾಕಲ್ಲ. ಯುದ್ಧ ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ. ಪಾಕಿಸ್ತಾನ ಹಲವು ಸಣ್ಣ ಅಣುಬಾಂಬ್‌ಗಳನ್ನು ಹೊಂದಿದೆ. ಆದ್ರೆ, ಅದನ್ನು ಭಾರತದ ಮೇಲೆ ನಾವು ಬಳಸಲ್ಲ ಅಂತಾ ಹೇಳಿದ್ದಾರೆ. ಎರಡು ದೇಶಗಳು ನ್ಯೂಕ್ಲಿಯರ್ ಪವರ್ ಹೊಂದಿವೆ.  ಇದರಿಂದಾಗಿ ವಿಶ್ವವೇ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಅಂತಾ ಶಾಂತಿಯ ಮಾತನ್ನಾಡಿದ್ದಾರೆ.

ಸಮಸ್ಯೆಗಳು ಯುದ್ಧದಿಂದ ಪರಿಹಾರವಾಗುತ್ತವೆ ಎಂಬುದನ್ನು ನಂಬುವುದಿಲ್ಲ. ಯುದ್ದದಿಂದ ಸಮಸ್ಯೆ ಪರಿಹಾರಕ್ಕೆ ಯತ್ನಿಸಿದವರೆಲ್ಲರೂ ಗೆಲುವಿನಲ್ಲೂ ಸೋತಿದ್ದಾರೆ. ಯುದ್ದದಿಂದಾದ ನಷ್ಟದಿಂದ ಚೇತರಿಸಿಕೊಳ್ಳಲು ವರ್ಷಗಳೇ ಹಿಡಿಯುತ್ತವೆ ಎನ್ನುವ ಮೂಲಕ ತಾವು ಭಾರತದೊಂದಿಗೆ ಯುದ್ಧಕ್ಕೆ ಸಿದ್ಧವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಕಾಶ್ಮೀರ ವಿಚಾರವನ್ನು ಅಂತಾರಾಷ್ಟ್ರೀಯಗೊಳಿಸಲು ಹೋಗಿ ತೀವ್ರ ಮುಖಭಂಗ ಎದುರಿಸಿದ ಪಾಕ್, ಜಾಗತಿಕ ರಾಷ್ಟ್ರಗಳು ತಮ್ಮ ಪರವಾಗಿಲ್ಲ ಎಂಬುದನ್ನು ಅರಿತು ಇದೀಗ ಶಾಂತಿ ಮಂತ್ರ ಪಠಿಸುತ್ತಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago