Featured

ಯುದ್ಧ ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ, ಭಾರತದೊಂದಿಗೆ ಎಂದಿಗೂ ಮೊದಲು ಯುದ್ದ ಆರಂಭಿಸುವುದಿಲ್ಲ : ಪಾಕ್ ಪ್ರಧಾನಿ ಇಮ್ರಾನ್ ಖಾನ್ -Vishwanews24

ಲಾಹೋರ್: ಕಾಶ್ಮೀರ ಜನತೆಗಾಗಿ ಎಲ್ಲದಕ್ಕೂ ಸಿದ್ಧ ಎನ್ನುತ್ತಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಚ್ಚರಿ ಮಾತುಗಳಾಡಿದ್ದಾರೆ. ಅದೇನಂದ್ರೆ ಪಾಕಿಸ್ತಾನ ಮೊದಲು ಅಣ್ವಸ್ತ್ರ ಬಳಸುವುದಿಲ್ಲವಂತೆ ಮತ್ತು ಭಾರತದೊಂದಿಗೆ ತಾನಾಗಿಯೇ ಮೊದಲು ಯುದ್ದ ಆರಂಭಿಸುವುದಿಲ್ಲವಂತೆ.

“ಭಾರತ ಮತ್ತು ಪಾಕಿಸ್ತಾನ ಎರಡೂ ಅಣ್ವಸ್ತ್ರ ರಾಷ್ಟ್ರಗಳಾಗಿದ್ದು, ಎರಡೂ ರಾಷ್ಟ್ರಗಳ ನಡುವೆ ಉದ್ವಿಗ್ನತೆ ತೀವ್ರಗೊಂಡಲ್ಲಿ ಜಗತ್ತು ತೀವ್ರ ಅಪಾಯ ಎದುರಿಸಲಿದೆ. ನಾವು ಎಂದಿಗೂ ಮೊದಲು ಅಣ್ವಸ್ತ್ರಗಳನ್ನು ಬಳಸುವುದಿಲ್ಲ” ಎಂದು ಸೋಮವಾರ ಲಾಹೋರ್​ನಲ್ಲಿ ನಡೆದ ಅಂತಾರಾಷ್ಟ್ರೀಯ ಸಿಖ್ ಸಮಾವೇಶದಲ್ಲಿ ಹೇಳಿದ್ದಾರೆ.

ಪಾಕಿಸ್ತಾನವು ಭಾರತದ ಮೇಲೆ ಮೊದಲು ನ್ಯೂಕ್ಲಿಯರ್ ಬಾಂಬ್ ಹಾಕಲ್ಲ. ಯುದ್ಧ ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ. ಪಾಕಿಸ್ತಾನ ಹಲವು ಸಣ್ಣ ಅಣುಬಾಂಬ್‌ಗಳನ್ನು ಹೊಂದಿದೆ. ಆದ್ರೆ, ಅದನ್ನು ಭಾರತದ ಮೇಲೆ ನಾವು ಬಳಸಲ್ಲ ಅಂತಾ ಹೇಳಿದ್ದಾರೆ. ಎರಡು ದೇಶಗಳು ನ್ಯೂಕ್ಲಿಯರ್ ಪವರ್ ಹೊಂದಿವೆ.  ಇದರಿಂದಾಗಿ ವಿಶ್ವವೇ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಅಂತಾ ಶಾಂತಿಯ ಮಾತನ್ನಾಡಿದ್ದಾರೆ.

ಸಮಸ್ಯೆಗಳು ಯುದ್ಧದಿಂದ ಪರಿಹಾರವಾಗುತ್ತವೆ ಎಂಬುದನ್ನು ನಂಬುವುದಿಲ್ಲ. ಯುದ್ದದಿಂದ ಸಮಸ್ಯೆ ಪರಿಹಾರಕ್ಕೆ ಯತ್ನಿಸಿದವರೆಲ್ಲರೂ ಗೆಲುವಿನಲ್ಲೂ ಸೋತಿದ್ದಾರೆ. ಯುದ್ದದಿಂದಾದ ನಷ್ಟದಿಂದ ಚೇತರಿಸಿಕೊಳ್ಳಲು ವರ್ಷಗಳೇ ಹಿಡಿಯುತ್ತವೆ ಎನ್ನುವ ಮೂಲಕ ತಾವು ಭಾರತದೊಂದಿಗೆ ಯುದ್ಧಕ್ಕೆ ಸಿದ್ಧವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಕಾಶ್ಮೀರ ವಿಚಾರವನ್ನು ಅಂತಾರಾಷ್ಟ್ರೀಯಗೊಳಿಸಲು ಹೋಗಿ ತೀವ್ರ ಮುಖಭಂಗ ಎದುರಿಸಿದ ಪಾಕ್, ಜಾಗತಿಕ ರಾಷ್ಟ್ರಗಳು ತಮ್ಮ ಪರವಾಗಿಲ್ಲ ಎಂಬುದನ್ನು ಅರಿತು ಇದೀಗ ಶಾಂತಿ ಮಂತ್ರ ಪಠಿಸುತ್ತಿದೆ.

Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

3 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

3 hours ago