Featured

ಯುದ್ಧ ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ, ಭಾರತದೊಂದಿಗೆ ಎಂದಿಗೂ ಮೊದಲು ಯುದ್ದ ಆರಂಭಿಸುವುದಿಲ್ಲ : ಪಾಕ್ ಪ್ರಧಾನಿ ಇಮ್ರಾನ್ ಖಾನ್ -Vishwanews24

ಲಾಹೋರ್: ಕಾಶ್ಮೀರ ಜನತೆಗಾಗಿ ಎಲ್ಲದಕ್ಕೂ ಸಿದ್ಧ ಎನ್ನುತ್ತಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಚ್ಚರಿ ಮಾತುಗಳಾಡಿದ್ದಾರೆ. ಅದೇನಂದ್ರೆ ಪಾಕಿಸ್ತಾನ ಮೊದಲು ಅಣ್ವಸ್ತ್ರ ಬಳಸುವುದಿಲ್ಲವಂತೆ ಮತ್ತು ಭಾರತದೊಂದಿಗೆ ತಾನಾಗಿಯೇ ಮೊದಲು ಯುದ್ದ ಆರಂಭಿಸುವುದಿಲ್ಲವಂತೆ.

“ಭಾರತ ಮತ್ತು ಪಾಕಿಸ್ತಾನ ಎರಡೂ ಅಣ್ವಸ್ತ್ರ ರಾಷ್ಟ್ರಗಳಾಗಿದ್ದು, ಎರಡೂ ರಾಷ್ಟ್ರಗಳ ನಡುವೆ ಉದ್ವಿಗ್ನತೆ ತೀವ್ರಗೊಂಡಲ್ಲಿ ಜಗತ್ತು ತೀವ್ರ ಅಪಾಯ ಎದುರಿಸಲಿದೆ. ನಾವು ಎಂದಿಗೂ ಮೊದಲು ಅಣ್ವಸ್ತ್ರಗಳನ್ನು ಬಳಸುವುದಿಲ್ಲ” ಎಂದು ಸೋಮವಾರ ಲಾಹೋರ್​ನಲ್ಲಿ ನಡೆದ ಅಂತಾರಾಷ್ಟ್ರೀಯ ಸಿಖ್ ಸಮಾವೇಶದಲ್ಲಿ ಹೇಳಿದ್ದಾರೆ.

ಪಾಕಿಸ್ತಾನವು ಭಾರತದ ಮೇಲೆ ಮೊದಲು ನ್ಯೂಕ್ಲಿಯರ್ ಬಾಂಬ್ ಹಾಕಲ್ಲ. ಯುದ್ಧ ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ. ಪಾಕಿಸ್ತಾನ ಹಲವು ಸಣ್ಣ ಅಣುಬಾಂಬ್‌ಗಳನ್ನು ಹೊಂದಿದೆ. ಆದ್ರೆ, ಅದನ್ನು ಭಾರತದ ಮೇಲೆ ನಾವು ಬಳಸಲ್ಲ ಅಂತಾ ಹೇಳಿದ್ದಾರೆ. ಎರಡು ದೇಶಗಳು ನ್ಯೂಕ್ಲಿಯರ್ ಪವರ್ ಹೊಂದಿವೆ.  ಇದರಿಂದಾಗಿ ವಿಶ್ವವೇ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಅಂತಾ ಶಾಂತಿಯ ಮಾತನ್ನಾಡಿದ್ದಾರೆ.

ಸಮಸ್ಯೆಗಳು ಯುದ್ಧದಿಂದ ಪರಿಹಾರವಾಗುತ್ತವೆ ಎಂಬುದನ್ನು ನಂಬುವುದಿಲ್ಲ. ಯುದ್ದದಿಂದ ಸಮಸ್ಯೆ ಪರಿಹಾರಕ್ಕೆ ಯತ್ನಿಸಿದವರೆಲ್ಲರೂ ಗೆಲುವಿನಲ್ಲೂ ಸೋತಿದ್ದಾರೆ. ಯುದ್ದದಿಂದಾದ ನಷ್ಟದಿಂದ ಚೇತರಿಸಿಕೊಳ್ಳಲು ವರ್ಷಗಳೇ ಹಿಡಿಯುತ್ತವೆ ಎನ್ನುವ ಮೂಲಕ ತಾವು ಭಾರತದೊಂದಿಗೆ ಯುದ್ಧಕ್ಕೆ ಸಿದ್ಧವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಕಾಶ್ಮೀರ ವಿಚಾರವನ್ನು ಅಂತಾರಾಷ್ಟ್ರೀಯಗೊಳಿಸಲು ಹೋಗಿ ತೀವ್ರ ಮುಖಭಂಗ ಎದುರಿಸಿದ ಪಾಕ್, ಜಾಗತಿಕ ರಾಷ್ಟ್ರಗಳು ತಮ್ಮ ಪರವಾಗಿಲ್ಲ ಎಂಬುದನ್ನು ಅರಿತು ಇದೀಗ ಶಾಂತಿ ಮಂತ್ರ ಪಠಿಸುತ್ತಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago