ಲಾಹೋರ್: ಕಾಶ್ಮೀರ ಜನತೆಗಾಗಿ ಎಲ್ಲದಕ್ಕೂ ಸಿದ್ಧ ಎನ್ನುತ್ತಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಚ್ಚರಿ ಮಾತುಗಳಾಡಿದ್ದಾರೆ. ಅದೇನಂದ್ರೆ ಪಾಕಿಸ್ತಾನ ಮೊದಲು ಅಣ್ವಸ್ತ್ರ ಬಳಸುವುದಿಲ್ಲವಂತೆ ಮತ್ತು ಭಾರತದೊಂದಿಗೆ ತಾನಾಗಿಯೇ ಮೊದಲು ಯುದ್ದ ಆರಂಭಿಸುವುದಿಲ್ಲವಂತೆ.
“ಭಾರತ ಮತ್ತು ಪಾಕಿಸ್ತಾನ ಎರಡೂ ಅಣ್ವಸ್ತ್ರ ರಾಷ್ಟ್ರಗಳಾಗಿದ್ದು, ಎರಡೂ ರಾಷ್ಟ್ರಗಳ ನಡುವೆ ಉದ್ವಿಗ್ನತೆ ತೀವ್ರಗೊಂಡಲ್ಲಿ ಜಗತ್ತು ತೀವ್ರ ಅಪಾಯ ಎದುರಿಸಲಿದೆ. ನಾವು ಎಂದಿಗೂ ಮೊದಲು ಅಣ್ವಸ್ತ್ರಗಳನ್ನು ಬಳಸುವುದಿಲ್ಲ” ಎಂದು ಸೋಮವಾರ ಲಾಹೋರ್ನಲ್ಲಿ ನಡೆದ ಅಂತಾರಾಷ್ಟ್ರೀಯ ಸಿಖ್ ಸಮಾವೇಶದಲ್ಲಿ ಹೇಳಿದ್ದಾರೆ.
ಪಾಕಿಸ್ತಾನವು ಭಾರತದ ಮೇಲೆ ಮೊದಲು ನ್ಯೂಕ್ಲಿಯರ್ ಬಾಂಬ್ ಹಾಕಲ್ಲ. ಯುದ್ಧ ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ. ಪಾಕಿಸ್ತಾನ ಹಲವು ಸಣ್ಣ ಅಣುಬಾಂಬ್ಗಳನ್ನು ಹೊಂದಿದೆ. ಆದ್ರೆ, ಅದನ್ನು ಭಾರತದ ಮೇಲೆ ನಾವು ಬಳಸಲ್ಲ ಅಂತಾ ಹೇಳಿದ್ದಾರೆ. ಎರಡು ದೇಶಗಳು ನ್ಯೂಕ್ಲಿಯರ್ ಪವರ್ ಹೊಂದಿವೆ. ಇದರಿಂದಾಗಿ ವಿಶ್ವವೇ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಅಂತಾ ಶಾಂತಿಯ ಮಾತನ್ನಾಡಿದ್ದಾರೆ.
ಸಮಸ್ಯೆಗಳು ಯುದ್ಧದಿಂದ ಪರಿಹಾರವಾಗುತ್ತವೆ ಎಂಬುದನ್ನು ನಂಬುವುದಿಲ್ಲ. ಯುದ್ದದಿಂದ ಸಮಸ್ಯೆ ಪರಿಹಾರಕ್ಕೆ ಯತ್ನಿಸಿದವರೆಲ್ಲರೂ ಗೆಲುವಿನಲ್ಲೂ ಸೋತಿದ್ದಾರೆ. ಯುದ್ದದಿಂದಾದ ನಷ್ಟದಿಂದ ಚೇತರಿಸಿಕೊಳ್ಳಲು ವರ್ಷಗಳೇ ಹಿಡಿಯುತ್ತವೆ ಎನ್ನುವ ಮೂಲಕ ತಾವು ಭಾರತದೊಂದಿಗೆ ಯುದ್ಧಕ್ಕೆ ಸಿದ್ಧವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಕಾಶ್ಮೀರ ವಿಚಾರವನ್ನು ಅಂತಾರಾಷ್ಟ್ರೀಯಗೊಳಿಸಲು ಹೋಗಿ ತೀವ್ರ ಮುಖಭಂಗ ಎದುರಿಸಿದ ಪಾಕ್, ಜಾಗತಿಕ ರಾಷ್ಟ್ರಗಳು ತಮ್ಮ ಪರವಾಗಿಲ್ಲ ಎಂಬುದನ್ನು ಅರಿತು ಇದೀಗ ಶಾಂತಿ ಮಂತ್ರ ಪಠಿಸುತ್ತಿದೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…