Featured

ಯುಪಿಎ ಅವಧಿಯ ಸಂದರ್ಭ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕೈ ಮುಖಂಡರಿಗೆ ಈಗ ವಿಲವಿಲ ಒದ್ದಾಡುವಂತಾಗಿದೆ : ಪ್ರಹ್ಲಾದ್‌ ಜೋಶಿ -Vishwanews24

ಯುಪಿಎ ಅವಧಿಯ ಸಂದರ್ಭ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕೈ ಮುಖಂಡರಿಗೆ ಈಗ ವಿಲವಿಲ ಒದ್ದಾಡುವಂತಾಗಿದೆ : ಪ್ರಹ್ಲಾದ್‌ ಜೋಶಿ -Vishwanews24

ಬೆಂಗಳೂರು : “ಯುಪಿಎ ಅವಧಿಯ ಸಂದರ್ಭ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕೈ ಮುಖಂಡರಿಗೆ ಈಗ ವಿಲವಿಲ ಒದ್ದಾಡುವಂತಾಗಿದೆ” ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಬಿಜೆಪಿ ರಾಜ್ಯ ಮಟ್ಟದ ‘ಇ ಪ್ರಶಿಕ್ಷಣ’ ಚಿಂತನವರ್ಗದಲ್ಲಿ ವೆಬೆಕ್ಸ್‌ ಮೂಲಕ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಒದಗಿಸುವ ವಿವಿಧ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆಯ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತಂದಿರುವ ಕಾರಣ ಒಂದು ರೂ. ಕೂಡಾ ಭ್ರಷ್ಟಾಚಾರ ಮಾಡಲು ಆಗುತ್ತಿಲ್ಲ. ಹಾಗಾಗಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕೈ ಮುಖಂಡರಿಗೆ ಈಗ ವಿಲವಿಲ ಒದ್ದಾಡುವಂತಾಗಿದೆ” ಎಂದಿದ್ದಾರೆ.

“ಪ್ರಧಾನಿ ಮೋದಿ ಅವರು 46 ಕೋಟಿ ಜನರ ಬ್ಯಾಂಕ್‌ ಖಾತೆಗಳನ್ನು ಜನ್‌ಧನ್‌‌ ಯೋಜನೆಯಡಿ ತೆರೆಸಿ ನೇರ ನಗದು ವರ್ಗಾವಣೆ ಜಾರಿಗೆ ತರುವ ಮೂಲಕ ಭ್ರಷ್ಟಾಚಾರ ಕಡಿವಾಣ ಹಾಕಿದ್ದಾರೆ. ಬ್ಯಾಂಕ್‌ಗಳ ರಾಷ್ಟ್ರೀಕರಣ ಮಾಡಿದರು ಕೂಡಾ ದೇಶದ ಬಡ ಜನರಿಗೆ ಅದರಿಂದ ಪ್ರಯೋಜನವಾಗಲಿಲ್ಲ. ಕಾಂಗ್ರೆಸ್ಸಿಗರ ಗರೀಬಿ ಹಠಾವೋ ಒಂದು ಘೋಷಣೆಯಾಗಿತ್ತು. ಆದರೆ, ಅದರಿಂದ ಬಡ ಜನರ ಅಭಿವೃದ್ದಿಯಾಗಿಲ್ಲ. ಅವರ ಅವಧಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿತ್ತು. ಆದರೆ, ಪ್ರಧಾನಿ ಮೋದಿ ಅವರ ಒಂದು ತೀರ್ಮಾನ ಬಡವರ ಪಾಲಿಗೆ ಬೆಳಕಾಗಿದೆ” ಎಂದು ತಿಳಿಸಿದ್ದಾರೆ.

“ಲಕ್ಷಾಂತರ ಹಳ್ಳಿಗಳಿಗೆ ಜಲ ಮಿಷನ್‌ ಯೋಜನೆಯಡಿ ಪ್ರಯೋಜನವಾಗಿದೆ. ಹುಬ್ಬಳ್ಳಿ, ಬೆಳಗಾವಿ, ತೋರಣಗಲ್‌, ಬೀದರ್‌ ಹಾಗೂ ಕಲಬುರ್ಗಿಯಲ್ಲಿ ಉಡಾನ್‌ ಯೋಜನೆಯಡಿ ವಿಮಾನ ನಿಲ್ದಾಣಗಳನ್ನು ಅಭಿವೃದ್ದಿ ಪಡಿಸಲಾಯಿತು. ಲಕ್ಷಾಂತರ ಹಳ್ಳಿಗಳಿಗೆ ಉಜಾಲಾ ಯೋಜನೆಯಡಿ ವಿದ್ಯುತ್ ಸಂರ್ಕ ಕಲ್ಪಿಸಲಾಗಿದೆ. ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರು ಸ್ವಾವಲಂಬಿಯಾಗುವ ಸಲುವಾಗಿ ಕೈಗೊಂಡ ಮಹತ್ವದ ಕಾರ್ಯವಾಗಿದೆ” ಎಂದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago