ನವ ಜೋಡಿಗೆ ರಕ್ಷಣೆಯ ಭರವಸೆ ನೀಡಿದ ಪೊಲೀಸರು..
ಹಿಂದೂ ಧರ್ಮದಲ್ಲಿ ಅಪಾರ ನಂಬಿಕೆ.. ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಗೌರವ ಸಿಗುವುದಿಲ್ಲ : ಹಿಂದೂ ಧರ್ಮಕ್ಕೆ ಮತಾಂತರಗೊಂಡ ಯುವತಿಯರು
ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ಇರಾಮ್ ಜೈದಿ ಸ್ವಾತಿ ಮತ್ತು ಶಹನಾಜ್ ಸುಮನ್ ಆದಳು.
ಮದಿನಾಥದಲ್ಲಿರುವ ಅಗಸ್ಟ್ ಮುನಿ ಆಶ್ರಮದಲ್ಲಿ ಪಂಡಿತ್ ಕೆ ಕೆ ಶಂಖಧರ್ ಅವರು ಹಿಂದೂ ಸಂಪ್ರದಾಯದಂತೆ ವಿವಾಹವನ್ನು ನೆರವೇರಿಸಿದರು. ಸ್ವಾತಿ ಆದೇಶ್ ಕುಮಾರ್ ಅವರನ್ನು ವಿವಾಹವಾದರು ಮತ್ತು ಸುಮನ್ ಅಜಯ್ ಎಂಬುವರನ್ನು ವಿವಾಹವಾದರು.
ಈ ಇಬ್ಬರೂ ಹುಡುಗಿಯರು ತಮಗೆ ಹಿಂದೂ ಧರ್ಮದಲ್ಲಿ ಅಪಾರ ನಂಬಿಕೆ ಇದೆ ಎಂದು ಹೇಳಿದರು. ‘ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಗೌರವ ಸಿಗುವುದಿಲ್ಲ. ಮುಸ್ಲಿಂ ಪುರುಷರು ಬಯಸಿದಾಗ, ಅವರು ಮೂರು ಬಾರಿ ತಲಾಖ್ ಅನ್ನು ಉಚ್ಚರಿಸಿ ವಿಚ್ಛೇದನ ನೀಡಿ ಹಲಾಲ ಸಂಸ್ಕಾರಕ್ಕೊಳಗೊಂಡು ಪುನಃ ತಾವು ವಿಚ್ಛೇದನ ನೀಡಿದ ಹೆಂಡತಿಯನ್ನು ಸೇರಿಸಿಕೊಳ್ಳುತ್ತಾರೆ’ ಎಂದು ಯುವತಿಯರು ಹೇಳಿದ್ದಾರೆ.
ಇಬ್ಬರು ಹುಡುಗಿಯರನ್ನು ಮೊದಲು ಪುರೋಹಿತರು ಶುದ್ಧೀಕರಿಸಿ ಹೆಸರುಗಳನ್ನು ಬದಲಾಯಿಸಿದ ನಂತರವೇ ಮದುವೆ ಶಾಸ್ತ್ರ ಪೂರೈಸಿದರು. ಮದುವೆ ಸಮಾರಂಭ ಪೂರ್ಣಗೊಂಡ ನಂತರ ವಧುಗಳು ಅರ್ಚಕರಿಂದ ಆಶೀರ್ವಾದ ಪಡೆದರು.
ಮದುವೆಯ ಕೆಲವು ಗಂಟೆಗಳ ನಂತರ ಯುವತಿಯರು ಬರೇಲಿಯ ಎಸ್ಎಸ್ಪಿ ಅವರನ್ನು ಭೇಟಿ ಮಾಡಿ, ಪೋಷಕರು ಮತ್ತು ಸಹೋದರರಿಂದ ನಮಗೆ ಜೀವಭಯವಿದೆ ಎಂದು ದೂರಿದರು. ಕುಟುಂಬಸ್ಥರು ತಮಗಾಗಿ ಸಮಾಧಿಯನ್ನು ಸಿದ್ಧಪಡಿಸಿರುವ ಆಘಾತಕಾರಿ ಸಂಗತಿಯನ್ನು ಪೊಲೀಸ್ ಅಧಿಕಾರಿಗೆ ತಿಳಿಸಿದರು. ಯುವತಿಯರಿಗೆ ಸಂಪೂರ್ಣ ಭದ್ರತೆಯನ್ನು ಒದಗಿಸುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…