ಲಖನೌ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗುತ್ತಿದೆ.
ಉತ್ತರ ಪ್ರದೇಶದಲ್ಲಿ ಮಧ್ಯಾಹ್ನದ ವೇಳೆಗೆ ಬಿಜೆಪಿ ಮೈತ್ರಿಕೂಟ 271ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಸಮಾಜವಾದಿ ಪಕ್ಷ ಮೈತ್ರಿಕೂಟ 121ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಕಾಂಗ್ರೆಸ್ ಹಾಗೂ ಬಿಎಸ್ಪಿ 4 ಕ್ಷೇತ್ರಗಳಲ್ಲಿ, ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಇದರೊಂದಿಗೆ, ಬಿಜೆಪಿ ಮರಳಿ ಅಧಿಕಾರಕ್ಕೇರುವುದು ಬಹುತೇಕ ಖಚಿತಗೊಂಡಿದೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತ ಗಳಿಸಿದರೆ, 1985ರ ಬಳಿಕ ಇದೇ ಮೊದಲ ಬಾರಿಗೆ ಆಡಳಿತ ಪಕ್ಷವೇ ಚುನಾವಣೆಯಲ್ಲಿ ಗೆದ್ದು ಸತತ ಎರಡನೇ ಬಾರಿಗೆ ಅಧಿಕಾರಕ್ಕೇರಿದಂತಾಗಲಿದೆ ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.
ಯೋಗಿ ಆದಿತ್ಯನಾಥ್ ಅವರೇ ಇನ್ನೊಂದು ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದರೆ ಅದೂ ಸಹ ದಾಖಲೆಯಾಗಲಿದೆ. 1950ರ ಬಳಿಕ ಇದೇ ಮೊದಲ ಬಾರಿಗೆ, ಐದು ವರ್ಷಗಳ ಪೂರ್ಣಾವಧಿ ಆಡಳಿತ ನಡೆಸಿದ ಬಳಿಕ ಮತ್ತೆ ಅಧಿಕಾರ ಉಳಿಸಿಕೊಂಡ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಗುರುತಿಸಿಕೊಳ್ಳಲಿದ್ದಾರೆ. 1950ರಿಂದ 54ರ ವರೆಗೆ ಗೋವಿಂದ ವಲ್ಲಭ ಪಂತ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 1955ರಿಂದ 61 ರವರೆಗೆ ಅವರೇ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದರು.
2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 312 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಎಸ್ಪಿ– 47, ಬಿಎಸ್ಪಿ– 19 ಹಾಗೂ ಕಾಂಗ್ರೆಸ್– 07ರಲ್ಲಿ ಗೆಲುವು ಸಾಧಿಸಿದ್ದವು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…