ವಿಜಯಪುರ: ಐಎಎಸ್ ಆಕಾಂಕ್ಷಿ ಎಂದು ಹೇಳಿಕೊಂಡು ಫೇಸ್ಬುಕ್ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್ಮೇಲ್ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕನಿಗೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ವಿಷಯ ತಿಳಿದು, ವಿಜಯಪುರ ಸಿಇಎನ್ ಪೊಲೀಸರು ಪ್ರಕರಣ ಭೇದಿಸಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಸನ ಮೂಲದ ಮಂಜುಳಾ ಎಂಬಾಕೆ ಫೇಸ್ಬುಕ್ ಫ್ರೆಂಡ್ ಆಗಿ ಯುವಕನನ್ನು ವಂಚಿಸಿದ್ದಳು. ಇದಕ್ಕೆ ಆಕೆಯ ಪತಿಯೇ ಸಾಥ್ ನೀಡಿದ್ದ ಎಂಬುದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ. ಪತಿ ಸ್ವಾಮಿ ಹಾಗೂ ತಾನು ಸೇರಿಯೇ ಈ ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡು ವಂಚನೆ ಮಾಡಿದ್ದೇವೆ ಎಂದು ಮಹಿಳೆ ತಪ್ಪೊಪ್ಪಿಕೊಂಡಿದ್ದಾಳೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…