Featured

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಮಾಹಿತಿಯ ಪ್ರಕಾರ, ಮೂಡೂರು ನಿವಾಸಿ ತಮೀಮ್ ಅವರ ಪುತ್ರ ಸುಫಿಯಾನ್ (23) ಮಂಗಳೂರಿನ ಮುನ್ನೂರು ಪ್ರದೇಶದಲ್ಲಿರುವ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮೇ 16, 2026ರಂದು ಸಂಜೆ ಕೆಲಸಕ್ಕೆ ತೆರಳಿದ್ದ ಅವರು, ಮೇ 17ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ದೂರವಾಣಿ ಮೂಲಕ ಕುಟುಂಬದವರನ್ನು ಸಂಪರ್ಕಿಸಿ ತಾನು ಕೆಲಸದ ಸ್ಥಳ ತಲುಪಿರುವುದಾಗಿ ತಿಳಿಸಿದ್ದರು.

ಆದರೆ, ಬಳಿಕ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಕುಟುಂಬದವರು ಹಾಗೂ ಸಂಬಂಧಿಕರು ಸಂಪರ್ಕಿಸಲು ಯತ್ನಿಸಿದರೂ ಯಾವುದೇ ಮಾಹಿತಿ ದೊರೆತಿಲ್ಲ. ಎಲ್ಲೆಡೆ ಹುಡುಕಾಟ ನಡೆಸಿದರೂ ಸುಫಿಯಾನ್ ಅವರ ಪತ್ತೆಯಾಗದ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ.ನಂ. 59/2026ರಂತೆ “ಗಂಡಸು ಕಾಣೆ” ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ:

ನಾಪತ್ತೆಯಾದ ಯುವಕನ ವಿವರ:

* ಹೆಸರು: ಸುಫಿಯಾನ್
* ತಂದೆಯ ಹೆಸರು: ತಮೀಮ್
* ವಯಸ್ಸು: 23 ವರ್ಷ
* ಎತ್ತರ: ಸುಮಾರು 5.6 ಅಡಿ
* ಮೈಬಣ್ಣ: ಕಪ್ಪು
* ಚಹರೆ: ಸಾಧಾರಣ ಶರೀರ
* ವಿಶೇಷ ಗುರುತು: ಬಲ ಭುಜದ ಮೇಲೆ ಸುಟ್ಟ ಗಾಯದ ಗುರುತು
* ಶಿಕ್ಷಣ: 10ನೇ ತರಗತಿ ತನಕ ವಿದ್ಯಾಭ್ಯಾಸ
* ಧರಿಸಿದ್ದ ಉಡುಪು: ಕಪ್ಪು ಬಣ್ಣದ ಟಿ-ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್
* ತಿಳಿದಿರುವ ಭಾಷೆ: ಕನ್ನಡ

ಸುಫಿಯಾನ್ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ನಿಯಂತ್ರಣ ಕೊಠಡಿ (0824-2220800) ಅಥವಾ ಕೊಣಾಜೆ ಪೊಲೀಸ್ ಠಾಣೆ (0824-2220536 / 9480802350) ಸಂಖ್ಯೆಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

14 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

15 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

15 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

16 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

17 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

17 hours ago