Featured

ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ : ಯುವತಿ ಅರೆಸ್ಟ್ – vishwanews24

ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ : ಯುವತಿ ಅರೆಸ್ಟ್

ಬೆಂಗಳೂರು: ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಹುಸಿಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಿಯಕರನಿಂದ ಪ್ರೇಮ ವಂಚನೆಗೊಳಗಾದ ಸಾಫ್ಟ್‌ವೇರ್‌ ಎಂಜಿನಿಯರ್ ರೆನಿ ಜೊಶೀಲ್ಡಾ ಪ್ರಮುಖ ಆರೋಪಿಯಾಗಿದ್ದು, ಉತ್ತರ ವಿಭಾಗದ ಸೆನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆ ಗುಜರಾತ್ ಅಹಮದಾಬಾದ್ ಕೇಂದ್ರ ಕಾರಾಗೃಹದಲ್ಲಿ ಇದ್ದುಕೊಂಡು ಬಾಂಬ್ ಬೆದರಿಕೆ ಹಾಕಿದ್ದಳು.

ಆರೋಪಿತೆ ಸಾಫ್ಟ್‌ವೇರ್ ಇಂಜಿನಿಯರ್ ಉದ್ಯೋಗಿ. ಬೆಂಗಳೂರಿನ ಪಬ್ಲಿಕ್ ಶಾಲೆಯೊಂದಕ್ಕೆ ಇಮೇಲ್ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಳು. ಜೂ.14 ರಂದು ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಗೆ ಬಾಂಬ್ ಬೆದರಿಕೆ ಕರೆಬಂದಿತ್ತು. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸ್ ಆಯುಕ್ತರು, ಉತ್ತರ ವಿಭಾಗ ಸೈಬರ್ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಿದ್ದರು.

ಆರೋಪಿತೆ VPN, ಇಂಟರನೆಟ್ ಬಳಕೆ ಮಾಡುತ್ತಿದ್ದಳು. ಗೇಟ್ ಕೋಡ್ ಎಂಬ ಅಪ್ಲೀಕೇಶನ್‌ನ ವರ್ಚುವಲ್ ಮೊಬೈಲ್ ನಂಬರ್ ಪಡೆದುಕೊಳ್ಳುತ್ತಿದ್ದಳು. ಸುಮಾರು ಆರರಿಂದ ಏಳು ವಾಟ್ಸಪ್ ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದಳು. ಬಾಂಡಿ ವಾರೆಂಟ್ ಮುಖಾಂತರ ಗುಜರಾತ್‌ನಿಂದ ಕರೆದುಕೊಂಡು ಬಂದು ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ಬೆಂಗಳೂರಿನ ಕಲಾಸಿಪಾಳ್ಯ ಸೇರಿ ಇತರೆ ಆರು ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಆರೋಪಿತಳ ವಿರುದ್ಧ ಗುಜರಾತ್, ಮೈಸೂರು, ತಮಿಳುನಾಡಿನ ಚೆನ್ನೈನಲ್ಲಿ ಹುಸಿಬಾಂಬ್ ಬೆದರಿಕೆ ಪ್ರಕರಣ ದಾಖಲಾಗಿದೆ.

ಆರೋಪಿತೆಯ ಪ್ರೀತಿ ನಿರಾಕರಣೆ ಮಾಡಿದ ಯುವಕನ ಸಂಕಷ್ಟಕ್ಕೆ ಸಿಕ್ಕಿಸಲು ಈ ಕೃತ್ಯ ಎಸಗಿದ್ದಾಳೆ. ಯುವಕನ ಇಮೇಲ್ ಐಡಿ ಬಳಸಿಕೊಂಡು ಹುಸಿಬಾಂಬ್ ಇಮೇಲ್ ಬೆದರಿಕೆ ಕಳಿಸಿದ್ದಳು. ಯುವಕನನ್ನ ಪದೇ ಪದೇ ಪ್ರೀತಿ ಮಾಡುವಂತೆ ಒತ್ತಾಯ ಮಾಡ್ತಿದ್ದಳು. ಆರೋಪಿತೆಯ ಪ್ರೀತಿ ಮತ್ತು ಗೆಳೆತನವನ್ನು ಯುವಕ ನಿರಾಕರಿಸಿದ್ದ. ಇದೇ ದ್ವೇಷಕ್ಕೆ ಆತನ ಹೆಸರಲ್ಲಿ ಹುಸಿಬಾಂಬ್ ಬೆದರಿಕೆ ಕಳುಹಿಸಿದ್ದಾಳೆ.

ಬೆಂಗಳೂರಿನ ಆರರಿಂದ ಏಳು ಶಾಲೆಗಳಿಗೆ ಹುಸಿಬಾಂಬ್ ಇಮೇಲ್ ಮಾಡಿದ್ದಳು. ಅಷ್ಟೇ ಅಲ್ಲದೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ಬಾಂಬ್ ಬೆದರಿಕೆ ಹಾಕಿದ್ದಳು. ಗುಜರಾತ್‌ನ ವಿಮಾನ ದುರಂತದ ಹಾಗೆ ನಿಮ್ಮ ಶಾಲೆಗಳನ್ನ ಉಡಾಯಿಸುವುದಾಗಿ ಬೆದರಿಕೆ ಹಾಕಿದ್ದಳು. ಸದ್ಯ ಕೂಲಂಕುಷವಾಗಿ ಆರೋಪಿತೆಯ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

1 hour ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

1 hour ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

2 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

3 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

3 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

3 hours ago