Featured

ಯುವತಿಯರು ಶಬರಿಮಲೆಗೆ ಹೋಗುವುದರಿಂದ ಅಯ್ಯಪ್ಪ ಭಕ್ತರನ್ನು ಪ್ರಚೋದಿಸಿದಂತಾಗುತ್ತದೆ : ಖ್ಯಾತ ಗಾಯಕ ಕೆ.ಜೆ.ಯೇಸುದಾಸ್‌ -Vishwanews24

ಕೊಚ್ಚಿನ್: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಖ್ಯಾತ ಗಾಯಕ ಕೆ.ಜೆ.ಯೇಸುದಾಸ್‌ ವಿರೋಧ ವ್ಯಕ್ತಪಡಿಸಿದ್ದು, ‘ಅಯ್ಯಪ್ಪ ಭಕ್ತರ ಪ್ರಚೋದಿಸಬೇಡಿ’ ಎಂದು ಎಚ್ಚರಿಕೆ ನೀಡಿದ್ದಾರೆ.

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ಹಂತ ತಲುಪಿರುವಂತೆಯೇ ಇತ್ತ ಇದೇ ವಿಚಾರವಾಗಿ ಮಾತನಾಡಿರುವ ಖ್ಯಾತ ಗಾಯಕ ಯೇಸುದಾಸ್ ಅವರು, ಮಹಿಳೆಯರ ಉಪಸ್ಥಿತಿಯಿಂದ ಪುರುಷ ಭಕ್ತರ ಮನಸ್ಸಿಗೆ ಭಂಗವಾಗಲಿದೆ ಎಂದಾದರೆ, ಮಹಿಳೆಯರು ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡದಿರುವುದೇ ಉತ್ತಮ ಎಂದು ಹೇಳಿದ್ದಾರೆ.

ದೇವಾಲಯಕ್ಕೆ ಆಗಮಿಸುವ ಅಯ್ಯಪ್ಪ ಭಕ್ತರ ನೇಮ- ನಿಷ್ಠೆ ಪದ್ಧತಿಗಳ ಮೂಲಕ ಒಳ್ಳೆಯ ಉದ್ದೇಶದಿಂದ ಬರುತ್ತಾರೆ. ಹಾಗಾಗಿ ಯುವತಿಯರು ದೇವಾಲಯಕ್ಕೆ ಹೋಗುವುದರಿಂದ ಅಯ್ಯಪ್ಪ ಭಕ್ತರನ್ನು ಪ್ರಚೋದಿಸಿದಂತಾಗುತ್ತದೆ. ಹಾಗಾಗಿ ಭಕ್ತರನ್ನು ಪ್ರಚೋದಿಸಬೇಡಿ ಎಂಬುದಷ್ಟೇ ನನ್ನ ಮನವಿ. ಇದೇ ಕಾರಣಕ್ಕೆ 50 ವರ್ಷಕ್ಕಿಂತ ಕಿರಿಯ ಮಹಿಳೆಯರು ಅಯ್ಯಪ್ಪ ದೇವಾಲಯಕ್ಕೆ ಹೋಗಬಾರದು ಎಂಬುದು ನನ್ನ ಅಭಿಪ್ರಾಯ ಎಂದಿದ್ದಾರೆ.

‘ಸುಂದರವಾದ ಹುಡುಗಿಯೊಬ್ಬಳು, ಇಂದು ಆಕೆ ಧರಿಸುವ ಉಡುಪಿನಲ್ಲಿ ದೇಗುಲಕ್ಕೆ ತೆರಳಿದರೆ ಸ್ವಾಮಿ ಅಯ್ಯಪ್ಪನೇನೂ ಕಣ್ತೆರೆದು ನೋಡುವುದಿಲ್ಲ. ಆದರೆ, ಇತರೆ ಭಕ್ತರು ನೋಡುತ್ತಾರೆ, ಇದು ಸರಿಯಲ್ಲ. ಇದರಿಂದ ಭಕ್ತರ ಉದ್ದೇಶವೇ ಬದಲಾಗಲಿದೆ. ಇದೇ ಕಾರಣದಿಂದ ನೀವು ಬರಬೇಡಿ ಎಂದು ಅವರಿಗೆ (ಮಹಿಳೆಯರಿಗೆ) ನಾವು ಹೇಳುತ್ತಿದ್ದೇವೆ. ಇನ್ನೂ ಸಾಕಷ್ಟು ದೇವಸ್ಥಾನಗಳಿವೆ. ಮಹಿಳೆಯರು ಅಲ್ಲಿಗೆ ಹೋಗಲಿ. ಅಯ್ಯಪ್ಪ ಭಕ್ತರನ್ನು ಪ್ರಚೋದಿಸಬೇಡಿ ಎಂಬುದಷ್ಟೇ ಮಹಿಳೆಯರಿಗೆ ನನ್ನ ಮನವಿ ಎಂದು ಯೇಸುದಾಸ್ ಕಿಡಿಕಾರಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

3 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

3 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

3 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

3 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

4 hours ago