ದೊಡ್ಮನೆ ಕುಡಿ ಯುವರಾಜ್ಕುಮಾರ್ ದಾಂಪತ್ಯದಲ್ಲಿ ಬಿರುಕಾಗಿದೆ. ಪತ್ನಿ ಶ್ರೀದೇವಿ ಡಿವೋರ್ಸ್ ನೀಡಲು ಜೂನ್ 6ರಂದು ಬೆಂಗಳೂರಿನ ಫ್ಯಾಮಿಲಿ ಕೋರ್ಟ್ಗೆ ಯುವ ಅರ್ಜಿ ಸಲ್ಲಿಸಿದ್ದಾರೆ. ಪತ್ನಿ ಶ್ರೀದೇವಿಗೆ ಕೋರ್ಟ್ನಿಂದ ಈಗಾಗಲೇ ಡಿವೋರ್ಸ್ ನೋಟಿಸ್ ಕೂಡ ಕಳುಹಿಸಲಾಗಿದೆ.
ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಯುವರಾಜ್ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ.
ಕಳೆದ 6 ತಿಂಗಳಿಂದ ಇಬ್ಬರ ಡಿವೋರ್ಸ್ ಸುದ್ದಿ ಹರಿದಾಡುತ್ತಿತ್ತು. ಇಬ್ಬರೂ ಜೊತೆಯಾಗಿ ವಾಸಿಸುತ್ತಿಲ್ಲ. ಯುವ ಸಿನಿಮಾದ ಪ್ರಚಾರ ಕಾರ್ಯದಲ್ಲಿಯೂ ಕೂಡ ಶ್ರೀದೇವಿ ಭಾಗಿಯಾಗಿಲ್ಲ.
ಹಲವು ವರ್ಷಗಳ ಪ್ರೀತಿಗೆ ಮೈಸೂರು ಮೂಲದ ಶ್ರೀದೇವಿ ಜೊತೆ 2018ರಲ್ಲಿ ಯುವರಾಜ್ಕುಮಾರ್ ನಿಶ್ಚಿತಾರ್ಥ ಜರುಗಿತ್ತು. 2019ರ ಮೇ 26ರಂದು ಅದ್ಧೂರಿಯಾಗಿ ಇಬ್ಬರ ಮದುವೆ ಜರುಗಿತ್ತು. ಈಗ ಇಬ್ಬರೂ ಡಿವೋರ್ಸ್ಗೆ ಮುಂದಾಗಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…