Featured

ಯುವವಾಹಿನಿ (ರಿ.) ಹೆಜಮಾಡಿ ಘಟಕ ದ ವತಿಯಿಂದ ತುಳುವೆರೆ ತುಳಸಿ ಪರ್ಬ ಆಚರಣೆ : ಜೀವನದಲ್ಲಿ ಸಾಧನೆ ಮಾಡಲು ದೇವರ ದಯೆ ಅಗತ್ಯ : ಸುಮನ್ ತಲ್ವಾರ್ :vishwanews24

ಯುವವಾಹಿನಿ (ರಿ.) ಹೆಜಮಾಡಿ ಘಟಕ ದ ವತಿಯಿಂದ ತುಳುವೆರೆ ತುಳಸಿ ಪರ್ಬ ಆಚರಣೆ :ಜೀವನದಲ್ಲಿ ಸಾಧನೆ ಮಾಡಲು ದೇವರ ದಯೆ ಅಗತ್ಯ : ಸುಮನ್ ತಲ್ವಾರ್ .

kaup: ಜೀವನದಲ್ಲಿ ಅನೇಕೆ ಏಳು ಬೀಳುಗಳ ನಡುವೆ ವಿಶೇಷವಾದ ಸಾಧನೆ ಮಾಡಲು ದೇವರ ದಯೆ ಅಗತ್ಯ ಎಂದು ದಕ್ಷಿಣ ಭಾರತದ ಬಹು ಭಾಷಾ ಚಲನಚಿತ್ರ ನಟ ಸುಮನ್ ತಲ್ವಾರ್ ಅಭಿಪ್ರಾಯ ಪಟ್ಟರು . ಅವರು ದಿನಾಂಕ 09-11-2019 ರಂದು ಯುವವಾಹಿನಿ(ರಿ.)ಹೆಜಮಾಡಿ ಘಟಕದ ಆಶ್ರಯದಲ್ಲಿ ಜರುಗಿದ 8 ನೇ ವರ್ಷದ ತುಳುವೆರೆ ತುಳಸಿ ಪರ್ಬದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು .
ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.)ಹೆಜಮಾಡಿ ಘಟಕದ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಹರೀಶ್ ರವರು ವಹಿಸಿದ್ದರು .
ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ನರೇಶ್ ಕುಮಾರ್ ಸಸಿಹಿತ್ಲು , ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಶ್ರೀ ಲೋಕೇಶ್ ಅಮೀನ್ , ಹೆಜಮಾಡಿ ಬ್ರಹ್ಮ್ಮ ಲಿಂಗೇಶ್ವರ ಆಲಡೆಯ ಪ್ರದಾನ ಅಧ್ಯಕ್ಷರಾದ ಶ್ರೀನಿವಾಸ್ ಭಟ್ , ಶಿರ್ವದ ವಕೀಲರಾದ ಮೆಲ್ವಿನ್ ಡಿ’ಸೋಜಾ , ಉದ್ಯಮಿ ಶೇಖಬ್ಬ ಉಚ್ಚಿಲ, ನಾರಾಯಣ ಗುರು ಅರ್ಬನ್ ಕೋ -ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಹರೀಶ್ ಚಂದ್ರ ಅಮೀನ್ ಮುಂತಾದವರು ಉಪಸ್ಥಿತರಿದ್ದರು .
ವೇದಿಕೆಯಲ್ಲಿ ಕಾರ್ಯದರ್ಶಿಯಾದ ಶ್ರೀ ರಾಕೇಶ್ , ಕಾರ್ಯಕ್ರಮದ ನಿರ್ದೇಶಕ ಶ್ರೀ ಮಹೇಂದ್ರ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು .
ಕಾರ್ಯಕ್ರಮದಲ್ಲಿ ತುಳುನಾಡಿನ ಸಾಂಪ್ರದಾಯಿಕ ಆಚರಣೆಯ ಪೂಜಾ ವಿಧಿ ವಿಧಾನಗಳನ್ನು ಹೆಜಮಾಡಿ ಗುರು ಮಂದಿರದ ಅರ್ಚಕ ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ನೆರವೇರಿಸಲಾಯಿತು .
ಯುವವಾಹಿನಿ (ರಿ.)ಹೆಜಮಾಡಿ ಘಟಕದ ಮಾಜಿ ಅಧ್ಯಕ್ಷ ಪ್ರಬೋಧ್ ಚಂದ್ರ ಹೆಜಮಾಡಿ ಪ್ರಸ್ತಾವನೆ ಗೈದರು . ಘಟಕದ ಮಹಿಳಾ ಸದಸ್ಯರು ಪ್ರಾರ್ಥನೆ ಗೈದರು . ಅಧ್ಯಕ್ಷೆ ಚಂದ್ರಾವತಿ ಹರೀಶ್ ಸ್ವಾಗತಿಸಿದರು . ಮನೋಹರ್ ಹೆಜ್ಮಾಡಿ ಹಾಗೂ ಧೀರಜ್ ಕೋಡಿ ನಿರೂಪಿಸಿದರು . ಕಾರ್ಯದರ್ಶಿ ರಾಕೇಶ್ ವಂದಿಸಿದರು .

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

28 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

43 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago