Featured

ಯುವವಾಹಿನಿ (ರಿ.) ಹೆಜಮಾಡಿ ಘಟಕ ದ ವತಿಯಿಂದ ತುಳುವೆರೆ ತುಳಸಿ ಪರ್ಬ ಆಚರಣೆ : ಜೀವನದಲ್ಲಿ ಸಾಧನೆ ಮಾಡಲು ದೇವರ ದಯೆ ಅಗತ್ಯ : ಸುಮನ್ ತಲ್ವಾರ್ :vishwanews24

ಯುವವಾಹಿನಿ (ರಿ.) ಹೆಜಮಾಡಿ ಘಟಕ ದ ವತಿಯಿಂದ ತುಳುವೆರೆ ತುಳಸಿ ಪರ್ಬ ಆಚರಣೆ :ಜೀವನದಲ್ಲಿ ಸಾಧನೆ ಮಾಡಲು ದೇವರ ದಯೆ ಅಗತ್ಯ : ಸುಮನ್ ತಲ್ವಾರ್ .

kaup: ಜೀವನದಲ್ಲಿ ಅನೇಕೆ ಏಳು ಬೀಳುಗಳ ನಡುವೆ ವಿಶೇಷವಾದ ಸಾಧನೆ ಮಾಡಲು ದೇವರ ದಯೆ ಅಗತ್ಯ ಎಂದು ದಕ್ಷಿಣ ಭಾರತದ ಬಹು ಭಾಷಾ ಚಲನಚಿತ್ರ ನಟ ಸುಮನ್ ತಲ್ವಾರ್ ಅಭಿಪ್ರಾಯ ಪಟ್ಟರು . ಅವರು ದಿನಾಂಕ 09-11-2019 ರಂದು ಯುವವಾಹಿನಿ(ರಿ.)ಹೆಜಮಾಡಿ ಘಟಕದ ಆಶ್ರಯದಲ್ಲಿ ಜರುಗಿದ 8 ನೇ ವರ್ಷದ ತುಳುವೆರೆ ತುಳಸಿ ಪರ್ಬದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು .
ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.)ಹೆಜಮಾಡಿ ಘಟಕದ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಹರೀಶ್ ರವರು ವಹಿಸಿದ್ದರು .
ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ನರೇಶ್ ಕುಮಾರ್ ಸಸಿಹಿತ್ಲು , ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಶ್ರೀ ಲೋಕೇಶ್ ಅಮೀನ್ , ಹೆಜಮಾಡಿ ಬ್ರಹ್ಮ್ಮ ಲಿಂಗೇಶ್ವರ ಆಲಡೆಯ ಪ್ರದಾನ ಅಧ್ಯಕ್ಷರಾದ ಶ್ರೀನಿವಾಸ್ ಭಟ್ , ಶಿರ್ವದ ವಕೀಲರಾದ ಮೆಲ್ವಿನ್ ಡಿ’ಸೋಜಾ , ಉದ್ಯಮಿ ಶೇಖಬ್ಬ ಉಚ್ಚಿಲ, ನಾರಾಯಣ ಗುರು ಅರ್ಬನ್ ಕೋ -ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಹರೀಶ್ ಚಂದ್ರ ಅಮೀನ್ ಮುಂತಾದವರು ಉಪಸ್ಥಿತರಿದ್ದರು .
ವೇದಿಕೆಯಲ್ಲಿ ಕಾರ್ಯದರ್ಶಿಯಾದ ಶ್ರೀ ರಾಕೇಶ್ , ಕಾರ್ಯಕ್ರಮದ ನಿರ್ದೇಶಕ ಶ್ರೀ ಮಹೇಂದ್ರ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು .
ಕಾರ್ಯಕ್ರಮದಲ್ಲಿ ತುಳುನಾಡಿನ ಸಾಂಪ್ರದಾಯಿಕ ಆಚರಣೆಯ ಪೂಜಾ ವಿಧಿ ವಿಧಾನಗಳನ್ನು ಹೆಜಮಾಡಿ ಗುರು ಮಂದಿರದ ಅರ್ಚಕ ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ನೆರವೇರಿಸಲಾಯಿತು .
ಯುವವಾಹಿನಿ (ರಿ.)ಹೆಜಮಾಡಿ ಘಟಕದ ಮಾಜಿ ಅಧ್ಯಕ್ಷ ಪ್ರಬೋಧ್ ಚಂದ್ರ ಹೆಜಮಾಡಿ ಪ್ರಸ್ತಾವನೆ ಗೈದರು . ಘಟಕದ ಮಹಿಳಾ ಸದಸ್ಯರು ಪ್ರಾರ್ಥನೆ ಗೈದರು . ಅಧ್ಯಕ್ಷೆ ಚಂದ್ರಾವತಿ ಹರೀಶ್ ಸ್ವಾಗತಿಸಿದರು . ಮನೋಹರ್ ಹೆಜ್ಮಾಡಿ ಹಾಗೂ ಧೀರಜ್ ಕೋಡಿ ನಿರೂಪಿಸಿದರು . ಕಾರ್ಯದರ್ಶಿ ರಾಕೇಶ್ ವಂದಿಸಿದರು .

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

20 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

20 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

20 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

21 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

22 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

22 hours ago