Featured

ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತಕ್ಕೆ ಬಲಿ – Vishwanews24

ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತಕ್ಕೆ ಬಲಿ

ಶಿಲಾಂಗ್: ಭಾರತದ ಭರವಸೆಯ ಟೇಬಲ್ ಟೆನಿಸ್ ಆಟಗಾರ, ತಮಿಳುನಾಡಿನ ವಿಶ್ವ ದೀನದಯಾಳನ್(18) ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶಿಲಾಂಗ್​ನಲ್ಲಿ ಸೋಮವಾರದಿಂದ ನಡೆಯಲಿರುವ 83ನೇ ಸೀನಿಯರ್ ರಾಷ್ಟ್ರೀಯ ಮತ್ತು ಅಂತರ ರಾಜ್ಯ ಟೇಬಲ್ ಟೆನ್ನಿಸ್‌​ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ತಂಡದ ಇತರ ಮೂವರು ಸಹ ಆಟಗಾರರೊಂದಿಗೆ ಗುವಾಹಟಿಯಿಂದ ಶಿಲ್ಲಾಂಗ್‌ಗೆ ಕಾರಿನಲ್ಲಿ ಯುವ ಟೆನಿಸ್​ ಆಟಗಾರ ವಿಶ್ವ ದೀನದಯಾಳನ್​ ಪ್ರಯಾಣಿಸುತ್ತಿದ್ದರು.

ಈ ವೇಳೆ ಭೀಕರ ಸಂಭವಿಸಿದ ಭೀಕರ ಅಪಘಾತದಲ್ಲಿ ವಿಶ್ವ ದೀನದಯಾಳನ್ ಕೊನೆಯುಸಿರೆಳೆದಿದ್ದಾರೆ.

ಟ್ರಾಕ್ಸಿಯಲ್ಲಿ ವಿಶ್ವ ದೀನದಯಾಳನ್ ಮತ್ತು ಅವರ ತಂಡ ಪ್ರಯಾಣಿಸುತ್ತಿತ್ತು. ಮಾರ್ಗಮಧ್ಯೆ ಮೇಘಾಲಯದ ರಿ-ಭೋಯ್ ಎಂಬಲ್ಲಿ ಎದುರು ದಿಕ್ಕಿನಿಂದ ಬಂದ ವಾಹನವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಟ್ಯಾಕ್ಸಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟ್ಯಾಕ್ಸಿ ನಜ್ಜುಗುಜ್ಜಾಗಿದ್ದು, ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಗಂಭೀರ ಗಾಯಗೊಂಡಿದ್ದ ವಿಶ್ವ ದೀನದಯಾಳನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಬದುಕಲಿಲ್ಲ.

ರಮೇಶ್ ಸಂತೋಷ್ ಕುಮಾರ್, ಅವಿನಾಶ್ ಪ್ರಸನ್ನಜಿ ಮತ್ತು ಕಿಶೋರ್ ಕುಮಾರ್ ಗಂಭೀರ ಗಾಯಗೊಂಡಿದ್ದಾರೆ ಎಂದು ಭಾರತ ಟೇಬಲ್ ಟೆನಿಸ್ ಫೆಡರೇಷನ್ ತಿಳಿಸಿದೆ.

ರಾಷ್ಟ್ರೀಯ ಟೂರ್ನಿಗಳಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿರುವ ವಿಶ್ವ ಅವರು ಅಂತಾರಾಷ್ಟ್ರೀಯ ಟೂರ್ನಿಗಳಲ್ಲೂ ಪದಕ ಗಳಿಸಿದ್ದಾರೆ. ಇದೇ 27ರಿಂದ ಆಸ್ಟ್ರಿಯಾದ ಲಿನ್ಜ್‌ನಲ್ಲಿ ನಡೆಯಲಿರುವ ಡಬ್ಲ್ಯುಟಿಟಿ ಯೂತ್ ಕಂಟೆಂಡರ್‌ನಲ್ಲಿ ಅವರು ಪಾಲ್ಗೊಳ್ಳಬೇಕಾಗಿತ್ತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago