Featured

ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತಕ್ಕೆ ಬಲಿ – Vishwanews24

ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತಕ್ಕೆ ಬಲಿ

ಶಿಲಾಂಗ್: ಭಾರತದ ಭರವಸೆಯ ಟೇಬಲ್ ಟೆನಿಸ್ ಆಟಗಾರ, ತಮಿಳುನಾಡಿನ ವಿಶ್ವ ದೀನದಯಾಳನ್(18) ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶಿಲಾಂಗ್​ನಲ್ಲಿ ಸೋಮವಾರದಿಂದ ನಡೆಯಲಿರುವ 83ನೇ ಸೀನಿಯರ್ ರಾಷ್ಟ್ರೀಯ ಮತ್ತು ಅಂತರ ರಾಜ್ಯ ಟೇಬಲ್ ಟೆನ್ನಿಸ್‌​ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ತಂಡದ ಇತರ ಮೂವರು ಸಹ ಆಟಗಾರರೊಂದಿಗೆ ಗುವಾಹಟಿಯಿಂದ ಶಿಲ್ಲಾಂಗ್‌ಗೆ ಕಾರಿನಲ್ಲಿ ಯುವ ಟೆನಿಸ್​ ಆಟಗಾರ ವಿಶ್ವ ದೀನದಯಾಳನ್​ ಪ್ರಯಾಣಿಸುತ್ತಿದ್ದರು.

ಈ ವೇಳೆ ಭೀಕರ ಸಂಭವಿಸಿದ ಭೀಕರ ಅಪಘಾತದಲ್ಲಿ ವಿಶ್ವ ದೀನದಯಾಳನ್ ಕೊನೆಯುಸಿರೆಳೆದಿದ್ದಾರೆ.

ಟ್ರಾಕ್ಸಿಯಲ್ಲಿ ವಿಶ್ವ ದೀನದಯಾಳನ್ ಮತ್ತು ಅವರ ತಂಡ ಪ್ರಯಾಣಿಸುತ್ತಿತ್ತು. ಮಾರ್ಗಮಧ್ಯೆ ಮೇಘಾಲಯದ ರಿ-ಭೋಯ್ ಎಂಬಲ್ಲಿ ಎದುರು ದಿಕ್ಕಿನಿಂದ ಬಂದ ವಾಹನವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಟ್ಯಾಕ್ಸಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟ್ಯಾಕ್ಸಿ ನಜ್ಜುಗುಜ್ಜಾಗಿದ್ದು, ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಗಂಭೀರ ಗಾಯಗೊಂಡಿದ್ದ ವಿಶ್ವ ದೀನದಯಾಳನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಬದುಕಲಿಲ್ಲ.

ರಮೇಶ್ ಸಂತೋಷ್ ಕುಮಾರ್, ಅವಿನಾಶ್ ಪ್ರಸನ್ನಜಿ ಮತ್ತು ಕಿಶೋರ್ ಕುಮಾರ್ ಗಂಭೀರ ಗಾಯಗೊಂಡಿದ್ದಾರೆ ಎಂದು ಭಾರತ ಟೇಬಲ್ ಟೆನಿಸ್ ಫೆಡರೇಷನ್ ತಿಳಿಸಿದೆ.

ರಾಷ್ಟ್ರೀಯ ಟೂರ್ನಿಗಳಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿರುವ ವಿಶ್ವ ಅವರು ಅಂತಾರಾಷ್ಟ್ರೀಯ ಟೂರ್ನಿಗಳಲ್ಲೂ ಪದಕ ಗಳಿಸಿದ್ದಾರೆ. ಇದೇ 27ರಿಂದ ಆಸ್ಟ್ರಿಯಾದ ಲಿನ್ಜ್‌ನಲ್ಲಿ ನಡೆಯಲಿರುವ ಡಬ್ಲ್ಯುಟಿಟಿ ಯೂತ್ ಕಂಟೆಂಡರ್‌ನಲ್ಲಿ ಅವರು ಪಾಲ್ಗೊಳ್ಳಬೇಕಾಗಿತ್ತು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

10 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

10 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

11 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

11 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

12 hours ago