ಬೆಂಗಳೂರು: ಈ ಬಾರಿ ವಿಶ್ವಬ್ಯಾಡ್ಮಿಂಟನ್ ಚಾಂಪಿಯನ್ ಪ್ರಶಸ್ತಿ ಪಡೆದ ಪಿ.ವಿ ಸಿಂಧು ಅವರನ್ನು ಯುವ ದಸರಾ ಕಾರ್ಯಕ್ರಮ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಅವರು ಆಹ್ವಾನ ಕೊಟ್ಟಿದ್ದಾರೆ.
ಅಕ್ಟೊಬರ್ 1 ರಂದು ಯುವ ದಸರಾ ಉದ್ಘಾಟನೆ ನಡೆಯಲಿದೆ ಈ ಒಂದು ಸಂದರ್ಭದಲ್ಲಿ ತಾವು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿ ಭಾರತದ ಕೀರ್ತಿ ಪತಾಕೆ ಪ್ರಪಂಚದಾದ್ಯಂತ ಹಾರಿಸಿದ್ದೀರಿ, ನೀವು ಲಕ್ಷಾಂತರ ಯುವ ಕ್ರೀಡಾ ಪ್ರತಿಭೆಗಳಿಗೆ ಸ್ಪೂರ್ತಿಯಾಗಿದ್ದೀರಿ ಹೀಗಾಗಿ ನೀವು ನಮ್ಮ ಮೈಸೂರು ದಸರಾ ಉದ್ಘಾಟನೆ ಮಾಡಬೇಕು ಎಂದು ಪತ್ರದ ಮುಖಂತರ ಕೋರಿಕೊಂಡಿದ್ದಾರೆ.
ಸದ್ಯ ನಮ್ಮ ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು ಪ್ರತಿವರ್ಷ ಸಡಗರ ಸಂಭ್ರಮದಿಂದ ಈ ನಾಡಹಬ್ಬ ದಸರಾವನ್ನು ಆಚರಿಸುತ್ತೇವೆ ಈ ಸಂದರ್ಭದಲ್ಲಿ ಹಲವು ಗಣ್ಯರು ಪ್ರತಿವರ್ಷ ದಸರಾ ಹಬ್ಬದ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡುತ್ತಾರೆ, ಹೀಗಾಗಿ ಅಕ್ಟೋಬರ್ 1ರಂದು ಯುವ ದಸರಾ ಉದ್ಘಾಟನೆ ಮಾಡಲು ಬನ್ನಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಪಿ.ವಿ.ಸಿಂಧು ಅವರಿಗೆ ಆಹ್ವಾನ ನೀಡಿದ್ದಾರೆ.
ವಿಶ್ವವಿಖ್ಯಾತ ಮೈಸೂರು ಯುವ ದಸರಾ ಉದ್ಘಾಟನೆ ರಾಜ್ಯದ ಅತಿಥಿಯಾಗಿ ಆಗಮಿಸುವಂತೆ ಸಿಎಂ ಆಹ್ವಾನ ನೀಡಿದ್ದು, ಅಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಯುವದಸರಾ ಮತ್ತು ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಚಿನ್ನದ ಹುಡುಗಿ ಪಿ.ವಿ.ಸಿಂಧು ಕರ್ನಾಟಕದ ಅತಿಥಿಯಾಗಿ ಆಗಮಿಸಲಿದ್ದಾರೆ. ಅವರ ಆಗಮನಕ್ಕೆ ಎಲ್ಲಾ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…