ಬೆಂಗಳೂರು: ಈ ಬಾರಿ ವಿಶ್ವಬ್ಯಾಡ್ಮಿಂಟನ್ ಚಾಂಪಿಯನ್ ಪ್ರಶಸ್ತಿ ಪಡೆದ ಪಿ.ವಿ ಸಿಂಧು ಅವರನ್ನು ಯುವ ದಸರಾ ಕಾರ್ಯಕ್ರಮ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಅವರು ಆಹ್ವಾನ ಕೊಟ್ಟಿದ್ದಾರೆ.
ಅಕ್ಟೊಬರ್ 1 ರಂದು ಯುವ ದಸರಾ ಉದ್ಘಾಟನೆ ನಡೆಯಲಿದೆ ಈ ಒಂದು ಸಂದರ್ಭದಲ್ಲಿ ತಾವು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿ ಭಾರತದ ಕೀರ್ತಿ ಪತಾಕೆ ಪ್ರಪಂಚದಾದ್ಯಂತ ಹಾರಿಸಿದ್ದೀರಿ, ನೀವು ಲಕ್ಷಾಂತರ ಯುವ ಕ್ರೀಡಾ ಪ್ರತಿಭೆಗಳಿಗೆ ಸ್ಪೂರ್ತಿಯಾಗಿದ್ದೀರಿ ಹೀಗಾಗಿ ನೀವು ನಮ್ಮ ಮೈಸೂರು ದಸರಾ ಉದ್ಘಾಟನೆ ಮಾಡಬೇಕು ಎಂದು ಪತ್ರದ ಮುಖಂತರ ಕೋರಿಕೊಂಡಿದ್ದಾರೆ.
ಸದ್ಯ ನಮ್ಮ ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು ಪ್ರತಿವರ್ಷ ಸಡಗರ ಸಂಭ್ರಮದಿಂದ ಈ ನಾಡಹಬ್ಬ ದಸರಾವನ್ನು ಆಚರಿಸುತ್ತೇವೆ ಈ ಸಂದರ್ಭದಲ್ಲಿ ಹಲವು ಗಣ್ಯರು ಪ್ರತಿವರ್ಷ ದಸರಾ ಹಬ್ಬದ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡುತ್ತಾರೆ, ಹೀಗಾಗಿ ಅಕ್ಟೋಬರ್ 1ರಂದು ಯುವ ದಸರಾ ಉದ್ಘಾಟನೆ ಮಾಡಲು ಬನ್ನಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಪಿ.ವಿ.ಸಿಂಧು ಅವರಿಗೆ ಆಹ್ವಾನ ನೀಡಿದ್ದಾರೆ.
ವಿಶ್ವವಿಖ್ಯಾತ ಮೈಸೂರು ಯುವ ದಸರಾ ಉದ್ಘಾಟನೆ ರಾಜ್ಯದ ಅತಿಥಿಯಾಗಿ ಆಗಮಿಸುವಂತೆ ಸಿಎಂ ಆಹ್ವಾನ ನೀಡಿದ್ದು, ಅಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಯುವದಸರಾ ಮತ್ತು ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಚಿನ್ನದ ಹುಡುಗಿ ಪಿ.ವಿ.ಸಿಂಧು ಕರ್ನಾಟಕದ ಅತಿಥಿಯಾಗಿ ಆಗಮಿಸಲಿದ್ದಾರೆ. ಅವರ ಆಗಮನಕ್ಕೆ ಎಲ್ಲಾ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…