ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.
ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ.ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…