ಬೆಂಗಳೂರು: ಯೂಥ್ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಪಾರದರ್ಶಕವಾಗಿ ನಡೆಯಲಿ. ಪಕ್ಷ ಸಂಘಟನೆ ಮಾಡುವ ಉತ್ತಮ ನಾಯಕನ ಆಯ್ಕೆಯಾಗಲಿ. ಈ ಚುನಾವಣೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ತಾಲೂಕುಮಟ್ಟದಿಂದ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದವರೆಗೂ ನಾಯಕರು ಬೆಳೆಯಬೇಕು ಎಂಬುದು ನಮ್ಮ ನಾಯಕರಾದ ರಾಜೀವ್ ಗಾಂಧಿ ಅವರ ಚಿಂತನೆ.
ಅದಕ್ಕಾಗಿ ಅವರು ಸಂವಿಧಾನ ತಿದ್ದುಪಡಿ ತಂದರು. ಹೀಗಾಗಿ ಯೂಥ್ ಕಾಂಗ್ರೆಸ್ ಚುನಾವಣೆ ನಡೆಯುತ್ತಿದೆ. ಪಾರದರ್ಶಕ ಹಾಗೂ ಮುಕ್ತವಾಗಿ ಚುನಾವಣೆ ನಡೆಯಬೇಕು. ಪಕ್ಷದ ಅಧ್ಯಕ್ಷನಾಗಿ ನಾನು ಯಾರ ಪರವಾಗಿ ನಿಲ್ಲುವುದಿಲ್ಲ. ಯಾರಿಗೂ ವಿರೋಧ ಮಾಡುವುದಿಲ್ಲ. ಯಾರಿಗೆ ಆಸಕ್ತಿ ಇದೆಯೋ, ಯಾರು ಪಕ್ಷಕ್ಕೆ ಸಮಯ ಕೊಟ್ಟು ಸಂಘಟನೆಗೆ ಶ್ರಮಿಸುತ್ತಾರೋ ಅಂತಹವರನ್ನು ಆಯ್ಕೆ ಮಾಡಿ ಕಳುಹಿಸಿ ಎಂದು ಮತದಾರರಿಗೆ ಮನವಿ ಮಾಡುತ್ತೇನೆ ಎಂದರು.
ಮಂಗಳೂರಿನಲ್ಲಿ ಮಿಥುನ್ ರೈಗೆ ಹೆಚ್ಚಿನ ಜವಾಬ್ದಾರಿ ಇದೆ. ಹಿಂದೆ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ನಾನು ಅವರಿಗೆ ಯೂಥ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸಲಹೆ ಕೊಟ್ಟೆ. ಬೇರೆಯವರಲ್ಲಿ ಸ್ಪರ್ಧಿಸುವ ಉತ್ಸಾಹ ಇತ್ತು. ಮಿಥುನ್ ನನ್ನ ಆಪ್ತ. ನನ್ನ ಹೆಸರಿಂದ ಒಬ್ಬರಿಗೆ ಅನುಕೂಲವಾಗಿ ಮತ್ತೊಬ್ಬರಿಗೆ ಹಿನ್ನಡೆಯಾಗುವುದು ಬೇಡ ಎಂದು ನಾನು ಸಲಹೆ ನೀಡಿದೆ ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…