ಬೆಂಗಳೂರು: ಯೂಥ್ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಪಾರದರ್ಶಕವಾಗಿ ನಡೆಯಲಿ. ಪಕ್ಷ ಸಂಘಟನೆ ಮಾಡುವ ಉತ್ತಮ ನಾಯಕನ ಆಯ್ಕೆಯಾಗಲಿ. ಈ ಚುನಾವಣೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ತಾಲೂಕುಮಟ್ಟದಿಂದ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದವರೆಗೂ ನಾಯಕರು ಬೆಳೆಯಬೇಕು ಎಂಬುದು ನಮ್ಮ ನಾಯಕರಾದ ರಾಜೀವ್ ಗಾಂಧಿ ಅವರ ಚಿಂತನೆ.
ಅದಕ್ಕಾಗಿ ಅವರು ಸಂವಿಧಾನ ತಿದ್ದುಪಡಿ ತಂದರು. ಹೀಗಾಗಿ ಯೂಥ್ ಕಾಂಗ್ರೆಸ್ ಚುನಾವಣೆ ನಡೆಯುತ್ತಿದೆ. ಪಾರದರ್ಶಕ ಹಾಗೂ ಮುಕ್ತವಾಗಿ ಚುನಾವಣೆ ನಡೆಯಬೇಕು. ಪಕ್ಷದ ಅಧ್ಯಕ್ಷನಾಗಿ ನಾನು ಯಾರ ಪರವಾಗಿ ನಿಲ್ಲುವುದಿಲ್ಲ. ಯಾರಿಗೂ ವಿರೋಧ ಮಾಡುವುದಿಲ್ಲ. ಯಾರಿಗೆ ಆಸಕ್ತಿ ಇದೆಯೋ, ಯಾರು ಪಕ್ಷಕ್ಕೆ ಸಮಯ ಕೊಟ್ಟು ಸಂಘಟನೆಗೆ ಶ್ರಮಿಸುತ್ತಾರೋ ಅಂತಹವರನ್ನು ಆಯ್ಕೆ ಮಾಡಿ ಕಳುಹಿಸಿ ಎಂದು ಮತದಾರರಿಗೆ ಮನವಿ ಮಾಡುತ್ತೇನೆ ಎಂದರು.
ಮಂಗಳೂರಿನಲ್ಲಿ ಮಿಥುನ್ ರೈಗೆ ಹೆಚ್ಚಿನ ಜವಾಬ್ದಾರಿ ಇದೆ. ಹಿಂದೆ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ನಾನು ಅವರಿಗೆ ಯೂಥ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸಲಹೆ ಕೊಟ್ಟೆ. ಬೇರೆಯವರಲ್ಲಿ ಸ್ಪರ್ಧಿಸುವ ಉತ್ಸಾಹ ಇತ್ತು. ಮಿಥುನ್ ನನ್ನ ಆಪ್ತ. ನನ್ನ ಹೆಸರಿಂದ ಒಬ್ಬರಿಗೆ ಅನುಕೂಲವಾಗಿ ಮತ್ತೊಬ್ಬರಿಗೆ ಹಿನ್ನಡೆಯಾಗುವುದು ಬೇಡ ಎಂದು ನಾನು ಸಲಹೆ ನೀಡಿದೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…