Featured

ಯೂರೋ ಕಪ್ ಫುಟ್ಬಾಲ್: ಇಂಗ್ಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಇಟಲಿ -Vishwanews24

ಯೂರೋ ಕಪ್ ಫುಟ್ಬಾಲ್: ಇಂಗ್ಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಇಟಲಿ -Vishwanews24

ಲಂಡನ್: ಇಂಗ್ಲೆಂಡ್ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 3-2 ಗೋಲುಗಳಿಂದ ಸೋಲಿಸಿದ ಬಲಿಷ್ಠ ಇಟಲಿ ಯೂರೋ ಕಪ್ ಫುಟ್ಬಾಲ್ ಟೂರ್ನಿಯ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ವೆಂಬ್ಲೆಯಲ್ಲಿ ಸೋಮವಾರ ನಡೆದ ರೋಚಕ ಪಂದ್ಯ 1-1 ಗೋಲುಗಳಿಂದ ಡ್ರಾ ಆದ ಬಳಿಕ ಪೆನಾಲ್ಟಿ ಶೂಟೌಟ್‌ಗೆ ಮೊರೆ ಹೋಗಬೇಕಾಯಿತು. ಪೆನಾಲ್ಟಿ ಶೂಟೌಟ್‌ನಲ್ಲಿ 3-2 ಗೋಲುಗಳ ಅಂತರದಿಂದ ಇಟಲಿ ತಂಡವು ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ 1968ರ ನಂತರ ಮೊದಲ ಬಾರಿಗೆ ಯುರೋಪಿಯನ್ ಚಾಂಪಿಯನ್‌ಶಿಪ್ ಅನ್ನು ಗೆದ್ದುಕೊಂಡಿತು.

ಪಂದ್ಯ ಆರಂಭವಾಗಿ ಎರಡನೇ ನಿಮಿಷದಲ್ಲೇ ಇಂಗ್ಲೆಂಡ್ ತಂಡ ಗೋಲು ಗಳಿಸಿತ್ತು. ಲ್ಯೂಕ್ ಶಾ ಭರ್ಜರಿ ಗೋಲಿನೊಂದಿಗೆ ಇಂಗ್ಲೆಂಡ್‌ ತಂಡಕ್ಕೆ ಕನಸಿನ ಆರಂಭವನ್ನು ನೀಡಿದ್ದರು. ಬಳಿಕ 67 ನಿಮಿಷದಲ್ಲಿ ಇಟಲಿಯ ಲಿಯೊನಾರ್ಡೊ ಬೊನುಸಿ ಗೋಲು ಗಳಿಸುವ ಮೂಲಕ ಪಂದ್ಯ 1-1 ಗೋಲುಗಳಿಂದ ಡ್ರಾ ಆಯಿತು.

ಬಳಿಕ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ 3-2 ಗೋಲುಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಇಟಲಿ ತಂಡ ಯುರೋಪಿಯನ್ ಚಾಂಪಿಯನ್‌ಶಿಪ್ ಅನ್ನು ಗೆದ್ದುಕೊಂಡಿತು. ಈ ಮೂಲಕ ಮೊದಲ ಬಾರಿ ಯುರೋಪಿಯನ್ ಚಾಂಪಿಯನ್‌ಶಿಪ್ ಟ್ರೋಫಿ ಗೆಲ್ಲುವ ಇಂಗ್ಲೆಂಡ್ ಕನಸು ಭಗ್ನವಾಯಿತು.

2006ರ ಫಿಫಾ ವಿಶ್ವಕಪ್ ಗೆಲುವಿನ ನಂತರ ಇಟಲಿ ಗೆದ್ದ ಮೊದಲ ಪ್ರಮುಖ ಅಂತರರಾಷ್ಟ್ರೀಯ ಟ್ರೋಫಿ ಇದಾಗಿದೆ. ಇಟಲಿ ಯುರೋ 2000 ಮತ್ತು ಯುರೋ 2012 ರಲ್ಲಿ ಫೈನಲ್ ತಲುಪಿತ್ತು. ಆದರೆ ಕ್ರಮವಾಗಿ ಫ್ರಾನ್ಸ್ ಮತ್ತು ಸ್ಪೇನ್ ವಿರುದ್ಧ ಸೋತಿತ್ತು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

22 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago