ಯೇಸು ಪ್ರತಿಮೆ : ಕಲ್ಲಡ್ಕ ಪ್ರಭಾಕರ್ ಭಟ್ ಅವರು ದಕ್ಷಿಣ ಕನ್ನಡ ಜಿಲ್ಲೆಯವರ ನೆಮ್ಮದಿ ಹಾಳು ಮಾಡಿದವರು : ಯು.ಟಿ ಖಾದರ್ -Vishwanews24
ಮಂಗಳೂರು: ಏಸು ಪ್ರತಿಮೆ ವಿರೋಧಿಸಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕನಕಪುರದಲ್ಲಿ ಚಲೋ ಹಮ್ಮಿಕೊಂಡಿರುವುದು ಅವರ ಸಣ್ಣ ಮನಸ್ಸನ್ನು ತೋರಿಸುತ್ತದೆ. ದೇವರ ಪ್ರತಿಮೆ ಮಾಡಲು ಅಡ್ಡಿ ಮಾಡುವ ಇವರ ಮನೋಭಾವಕ್ಕೆ ಏನು ಹೇಳಬೇಕು ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಸಚಿವ ಯು.ಟಿ ಖಾದರ್ ಬೇಸರ ಮಾಡಿಕೊಂಡಿದ್ದಾರೆ.
ಶಾಂತಿ ಸಂದೇಶ ಸಾರಲು ಕನಕಪುರ ತಾಲೂಕಿನ ಹಾರೋಹಳ್ಳಿಯ ಕಪಾಲಿಬೆಟ್ದಲ್ಲಿ ಏಸು ಪ್ರತಿಮೆ ನಿರ್ಮಿಸಲಾಗುತ್ತಿದೆ. ಕ್ರೈಸ್ತ ಸಮುದಾಯವರ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು ಸಮಾಜಕ್ಕೆ ಪೂರಕವಾಗಿದೆ. ಕ್ರೈಸ್ತ ಸಮುದಾಯವರು ಯಾವುದನ್ನೂ ಮಿಸ್ ಯೂಸ್ ಮಾಡೋದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ದೇಶಭಕ್ತಿ ಎಂದು ಹೇಳುವವರು ನಿರ್ಗತಿಕರನ್ನು ನೋಡೋದಿಲ್ಲ. ಕಲ್ಲಡ್ಕ ಪ್ರಭಾಕರ್ ಭಟ್ ಅಲ್ಲಿನ ಸೋದರತೆ ಹಾಳು ಮಾಡುವ ಉದ್ದೇಶದಿಂದ ಹೋಗಿದ್ದಾರೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಣ ಮಾಡುವ ಅಗತ್ಯತೆ ಏನಿತ್ತು? ಅವರು ದಕ್ಷಿಣ ಕನ್ನಡ ಜಿಲ್ಲೆಯವರ ನೆಮ್ಮದಿ ಹಾಳು ಮಾಡಿದವರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನಕಪುರ ಹಾಗೂ ಬೆಂಗಳೂರಿನವರಾದರೂ ಶಾಂತಿಯಿಂದ ನೆಮ್ಮದಿಯಿಂದ ಇರಲಿ. ಇಲ್ಲಿ ನಾವು ನರಕ ಅನುಭವಿಸುತ್ತಿರೋದೇ ಸಾಕು ಎಂದು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಮಾಜಿ ಸಚಿವ ಯುಟಿ ಖಾದರ್ ವಾಗ್ದಾಳಿ ನಡೆಸಿದರು.
