ಮಂಗಳೂರು: ಏಸು ಪ್ರತಿಮೆ ವಿರೋಧಿಸಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕನಕಪುರದಲ್ಲಿ ಚಲೋ ಹಮ್ಮಿಕೊಂಡಿರುವುದು ಅವರ ಸಣ್ಣ ಮನಸ್ಸನ್ನು ತೋರಿಸುತ್ತದೆ. ದೇವರ ಪ್ರತಿಮೆ ಮಾಡಲು ಅಡ್ಡಿ ಮಾಡುವ ಇವರ ಮನೋಭಾವಕ್ಕೆ ಏನು ಹೇಳಬೇಕು ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಸಚಿವ ಯು.ಟಿ ಖಾದರ್ ಬೇಸರ ಮಾಡಿಕೊಂಡಿದ್ದಾರೆ.
ಶಾಂತಿ ಸಂದೇಶ ಸಾರಲು ಕನಕಪುರ ತಾಲೂಕಿನ ಹಾರೋಹಳ್ಳಿಯ ಕಪಾಲಿಬೆಟ್ದಲ್ಲಿ ಏಸು ಪ್ರತಿಮೆ ನಿರ್ಮಿಸಲಾಗುತ್ತಿದೆ. ಕ್ರೈಸ್ತ ಸಮುದಾಯವರ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು ಸಮಾಜಕ್ಕೆ ಪೂರಕವಾಗಿದೆ. ಕ್ರೈಸ್ತ ಸಮುದಾಯವರು ಯಾವುದನ್ನೂ ಮಿಸ್ ಯೂಸ್ ಮಾಡೋದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ದೇಶಭಕ್ತಿ ಎಂದು ಹೇಳುವವರು ನಿರ್ಗತಿಕರನ್ನು ನೋಡೋದಿಲ್ಲ. ಕಲ್ಲಡ್ಕ ಪ್ರಭಾಕರ್ ಭಟ್ ಅಲ್ಲಿನ ಸೋದರತೆ ಹಾಳು ಮಾಡುವ ಉದ್ದೇಶದಿಂದ ಹೋಗಿದ್ದಾರೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಣ ಮಾಡುವ ಅಗತ್ಯತೆ ಏನಿತ್ತು? ಅವರು ದಕ್ಷಿಣ ಕನ್ನಡ ಜಿಲ್ಲೆಯವರ ನೆಮ್ಮದಿ ಹಾಳು ಮಾಡಿದವರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನಕಪುರ ಹಾಗೂ ಬೆಂಗಳೂರಿನವರಾದರೂ ಶಾಂತಿಯಿಂದ ನೆಮ್ಮದಿಯಿಂದ ಇರಲಿ. ಇಲ್ಲಿ ನಾವು ನರಕ ಅನುಭವಿಸುತ್ತಿರೋದೇ ಸಾಕು ಎಂದು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಮಾಜಿ ಸಚಿವ ಯುಟಿ ಖಾದರ್ ವಾಗ್ದಾಳಿ ನಡೆಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…