Featured

ಯೋಗಾಸನದಲ್ಲಿ ಮತ್ತೆರಡು ವಿಶ್ವ ದಾಖಲೆ ಬರೆದ ಉಡುಪಿಯ ತನುಶ್ರೀ – Vishwanews24

ಉಡುಪಿ: ಉಡುಪಿಯ ತನುಶ್ರೀ ಪಿತ್ರೋಡಿ (10) ಸಂತ ಸಿಸಿಲೀಸ್ ಸಮೂಹ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ಶನಿವಾರ ಎರಡು ವಿಶ್ವ ದಾಖಲೆ ನಿರ್ಮಿಸಿದ್ದಾಳೆ. 

ಯೋಗಾಸನದಲ್ಲಿ ಎರಡು ಜಾಗತಿಕ ದಾಖಲೆ ಮಾಡಿರುವ 10ರ ಹರೆಯದ ತನುಶ್ರೀ ಪಿತ್ರೋಡಿ ಧನುರಾಸನದ ನಂಬರ್ ಆಫ್ ರೋಲ್ಸ್ ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. 1 ನಿಮಿಷದಲ್ಲಿ 62 ಉರುಳು ಹಾಕಿದ್ದಲ್ಲದೆ, 1.40 ನಿಮಿಷದಲ್ಲಿ 100 ಉರುಳುಗಳನ್ನು ಹಾಕುವ ವಿಶಿಷ್ಟ ದಾಖಲೆ ಇದು.

ಧನುರಾಸನ ಹಾಕಿ ಒಂದು ನಿಮಿಷದಲ್ಲಿ ಅತಿ ಹೆಚ್ಚು ಬಾರಿ (62) ಉರುಳಿದ್ದು ಒಂದು ದಾಖಲೆಯಾದರೆ 1 ನಿಮಿಷ 40 ಸೆಕೆಂಡ್‍ಗಳಲ್ಲಿ ಅತಿ ವೇಗವಾಗಿ 100 ಬಾರಿ ಉರುಳಿದ್ದು ಮತ್ತೊಂದು ದಾಖಲೆಯಾಗಿದೆ.

ಎರಡೂ ದಾಖಲೆಗಳು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಸೇರಿವೆ. ಒಟ್ಟು ವಿಶ್ವ ದಾಖಲೆಗಳ ಸಂಖ್ಯೆ ನಾಲ್ಕಕ್ಕೇರಿದೆ. 2017, ನ. 11ರಂದು ನಿರಾಲಂಬ ಪೂರ್ಣ ಚಕ್ರಾಸನ ಕಠಿಣ ಯೋಗಾಸನವನ್ನು ಒಂದು ನಿಮಿಷದಲ್ಲಿ 19 ಬಾರಿ ಮಾಡಿ ಗೋಲ್ಡನ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್ ಸೇರಿದ್ದಳು.

ಈ ಅಪೂರ್ವ ಸಾಧನೆಗಾಗಿ ತನುಶ್ರೀಗೆ ಸ್ಥಳದಲ್ಲೇ ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನ ದಕ್ಷಿಣ ಏಷ್ಯಾ ನಿರ್ದೇಶಕ ಮನೀಶ್ ಬಿಶ್ನೋಯಿ ಪ್ರಮಾಣಪತ್ರ ಹಸ್ತಾಂತರಿಸಿದರು.

ಪೋರಿಯ ಈ ಸಾಧನೆಗೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಸ್ಥಳದಲ್ಲೇ ಪ್ರಮಾಣಪತ್ರ ನೀಡಿ ಗೌರವಿಸಿತು.

ಸತತ 3 ವರ್ಷದಲ್ಲಿ ನಾಲ್ಕು ಸಾಧನೆ ಮಾಡಿರುವ ತನುಶ್ರೀ ಉಡುಪಿ ಸೇಂಟ್ ಸಿಸಿಲೀಸ್ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿ.

2018, ಏ.7ರಂದು ಪಿತ್ರೋಡಿಯ ವೆಂಕಟರಮಣ ಸ್ಪೋರ್ಟ್ಸ್‌ ಆ್ಯಂಡ್ ಕಲ್ಚರಲ್ಸ್ ಸಂಸ್ಥೆ ನೇತೃತ್ವದಲ್ಲಿ ‘ಮೋಸ್ಟ್ ಫುಲ್ ಬಾಡಿ ರೆವಲ್ಯುಶನ್ ಮೆಯಿಂಟೈನಿಂಗ್ ಎ ಚೆಸ್ಟ್ ಸ್ಟ್ಯಾಂಡ್ ಪೊಸಿಶನ್’ ಒಂದು ನಿಮಿಷದಲ್ಲಿ 42 ಬಾರಿ ಮಾಡಿ ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ ಸೇರಿದ್ದಳು.

ತನುಶ್ರೀ ಪಿತ್ರೋಡಿ ಸಂತ ಸಿಸಿಲಿ ಕನ್ನಡ ಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಭರತನಾಟ್ಯ, ಯಕ್ಷಗಾನದಲ್ಲೂ ಸೈ ಎನಿಸಿಕೊಂಡಿದ್ದಾಳೆ.

 

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

7 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

8 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

8 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

9 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

9 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

9 hours ago