ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ಹತ್ಯೆಯಾಗಿದೆ. ಈ ವಿಚಾರವಾಗಿ ವೀರಾಪೂರ ಓಣಿಯ ಕಾಂಗ್ರೆಸ್ ಕಾರ್ಪೊರೇಟರ್ ಹಾಗೂ ನೇಹಾ ಹಿರೇಮಠ್ ತಂದೆ ನಿರಂಜನ ಹಿರೇಮಠ ಹುಬ್ಬಳ್ಳಿ ಪೊಲೀಸರು ಹಾಗೂ ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.
ನನ್ನ ವಾರ್ಡ್ನಲ್ಲಿ ಇಂತಹ ಘಟನೆಯಾಗಿರುವುದನ್ನ ನಾನು ಖಂಡಿಸುತ್ತೇನೆ. ನನ್ನ ಪುತ್ರಿಯ ನೇಹಾ ಹತ್ಯೆ ನಡೆದು ಇನ್ನೂ ಒಂದು ತಿಂಗಳು ಕಳೆದಿಲ್ಲ. ಈ ರೀತಿ ಘಟನೆ ಮತ್ತೆ ಮರುಕಳಿಸಿದೆ. ನನ್ನ ಪುತ್ರಿ ಹತ್ಯೆಯಾದಾಗಲೇ ಈ ರೀತಿಯ ಮತ್ತೊಂದು ಘಟನೆಯಾಗಬಾರದು ಅಂತ ಹೇಳಿದ್ದೆ. ಆದರೂ ಇಂತಹ ಘಟನೆ ನಡೆದಿದೆ ಇದಕ್ಕೆ ಇಲ್ಲಿನ ಪೊಲೀಸ್ ಕಮೀಷನರ್ ಅವರೇ ಕಾರಣ. ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಎಲ್ಲಾ ಕಡೆ ಯುವಕರು ಡ್ರಗ್ಸ್ ಹಾವಳಿಗೆ ದಾರಿ ತಪ್ಪುತ್ತಿದ್ದಾರೆ. ಹುಬ್ಬಳ್ಳಿ ಪೊಲೀಸರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಕರ್ನಾಟಕಕ್ಕೂ ಉತ್ತರಪ್ರದೇಶ, ಹೈದರಾಬಾದ್ ಮಾದರಿಯಲ್ಲೇ ಎನ್ಕೌಂಟರ್ ಆಗಬೇಕು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ನಮ್ಮ ರಾಜ್ಯಕ್ಕೂ ಬೇಕಿದೆ ಎಂದು ಹೇಳಿದ್ದಾರೆ.
ಇಲ್ಲಿನ ಪೊಲೀಸ್ ಆಯುಕ್ತರು ಸರಿಯಾದ ಯಾವ ಕ್ರಮವನು ಕೈಗೊಳ್ಳುತ್ತಿಲ್ಲ. ಸರಿಯಾಗಿ ಕೆಲಸ ಮಾಡಲು ಇಷ್ಟ ಇಲ್ಲದಿದ್ದರೇ ರಾಜೀನಾಮೆ ಕೊಟ್ಟು ಹೋಗಲಿ. ಅಂಜಲಿ ಕೂಡ ನನ್ನ ಮಗಳಿದ್ದಂತೆ. ನನ್ನ ಪುತ್ರಿ ನೇಹಾಳ ಹತ್ಯೆ ವಿಚಾರವಾಗಿ ಯಾವ ರೀತಿ ಹೋರಾಟ ನಡೆದಿತ್ತು ಅದೇ ರೀತಿ ಇವಳ ಹತ್ಯೆಯನ್ನ ಖಂಡಿಸಬೇಕು ಎಂದು ನಿರಂಜನ ಹಿರೇಮಠ ಹೇಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…