ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ಹತ್ಯೆಯಾಗಿದೆ. ಈ ವಿಚಾರವಾಗಿ ವೀರಾಪೂರ ಓಣಿಯ ಕಾಂಗ್ರೆಸ್ ಕಾರ್ಪೊರೇಟರ್ ಹಾಗೂ ನೇಹಾ ಹಿರೇಮಠ್ ತಂದೆ ನಿರಂಜನ ಹಿರೇಮಠ ಹುಬ್ಬಳ್ಳಿ ಪೊಲೀಸರು ಹಾಗೂ ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.
ನನ್ನ ವಾರ್ಡ್ನಲ್ಲಿ ಇಂತಹ ಘಟನೆಯಾಗಿರುವುದನ್ನ ನಾನು ಖಂಡಿಸುತ್ತೇನೆ. ನನ್ನ ಪುತ್ರಿಯ ನೇಹಾ ಹತ್ಯೆ ನಡೆದು ಇನ್ನೂ ಒಂದು ತಿಂಗಳು ಕಳೆದಿಲ್ಲ. ಈ ರೀತಿ ಘಟನೆ ಮತ್ತೆ ಮರುಕಳಿಸಿದೆ. ನನ್ನ ಪುತ್ರಿ ಹತ್ಯೆಯಾದಾಗಲೇ ಈ ರೀತಿಯ ಮತ್ತೊಂದು ಘಟನೆಯಾಗಬಾರದು ಅಂತ ಹೇಳಿದ್ದೆ. ಆದರೂ ಇಂತಹ ಘಟನೆ ನಡೆದಿದೆ ಇದಕ್ಕೆ ಇಲ್ಲಿನ ಪೊಲೀಸ್ ಕಮೀಷನರ್ ಅವರೇ ಕಾರಣ. ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಎಲ್ಲಾ ಕಡೆ ಯುವಕರು ಡ್ರಗ್ಸ್ ಹಾವಳಿಗೆ ದಾರಿ ತಪ್ಪುತ್ತಿದ್ದಾರೆ. ಹುಬ್ಬಳ್ಳಿ ಪೊಲೀಸರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಕರ್ನಾಟಕಕ್ಕೂ ಉತ್ತರಪ್ರದೇಶ, ಹೈದರಾಬಾದ್ ಮಾದರಿಯಲ್ಲೇ ಎನ್ಕೌಂಟರ್ ಆಗಬೇಕು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ನಮ್ಮ ರಾಜ್ಯಕ್ಕೂ ಬೇಕಿದೆ ಎಂದು ಹೇಳಿದ್ದಾರೆ.
ಇಲ್ಲಿನ ಪೊಲೀಸ್ ಆಯುಕ್ತರು ಸರಿಯಾದ ಯಾವ ಕ್ರಮವನು ಕೈಗೊಳ್ಳುತ್ತಿಲ್ಲ. ಸರಿಯಾಗಿ ಕೆಲಸ ಮಾಡಲು ಇಷ್ಟ ಇಲ್ಲದಿದ್ದರೇ ರಾಜೀನಾಮೆ ಕೊಟ್ಟು ಹೋಗಲಿ. ಅಂಜಲಿ ಕೂಡ ನನ್ನ ಮಗಳಿದ್ದಂತೆ. ನನ್ನ ಪುತ್ರಿ ನೇಹಾಳ ಹತ್ಯೆ ವಿಚಾರವಾಗಿ ಯಾವ ರೀತಿ ಹೋರಾಟ ನಡೆದಿತ್ತು ಅದೇ ರೀತಿ ಇವಳ ಹತ್ಯೆಯನ್ನ ಖಂಡಿಸಬೇಕು ಎಂದು ನಿರಂಜನ ಹಿರೇಮಠ ಹೇಳಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…