Featured

ಯೋಗಿ ನಾಡಲ್ಲಿ ಕೇಸರಿ ಗಾಂಧಿ…

ಲಕ್ನೋ: ಕೇಸರಿ.. ಕೇಸರಿ.. ಕೇಸರಿ… ಅದೊಂದು ರಾಜ್ಯದಲ್ಲಿ ಎಲ್ಲೆಲ್ಲೂ ಕೇಸರಿ. ಉತ್ತರ ಪ್ರದೇಶದಲ್ಲಿ ಸರ್ಕಾರಿ ಕಟ್ಟಡಗಳು, ನಾಯಕರ ಪ್ರತಿಮೆಗಳು ಎಲ್ಲವೂ ಕೇಸರಿಮಯವಾಗ್ತಿವೆ. ಅದ್ರಲ್ಲೂ ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನೂ ಕೇಸರಿ ಮಯವಾಗಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಮತ್ತೆ ಬಾಬಾ ಸಾಹೇಬರ ಪುತ್ಥಳಿಯ ಬಣ್ಣವನ್ನ ಬದಲಿಸಿ ವಿವಾದಕ್ಕೆ ಫುಲ್​ಸ್ಟಾಪ್ ಇಟ್ಟಿದ್ದರು. ಇದೀಗ ಮತ್ತೆ ಕೇಸರಿ ವಿವಾದ ಹುಟ್ಟಿಕೊಂಡಿದೆ.

ಎರಡು ದಿನಗಳ ಹಿಂದಷ್ಟೇ ಸಿಎಂ ಹೋಗಿ ಆದಿತ್ಯನಾಥ್, ದೀನ್ ದಯಾಳ್ ಉಪಾಧ್ಯಾಯ ರೇಲ್ವೆ ನಿಲ್ದಾಣಕ್ಕೆ ಕೇಸರಿ ಬಣ್ಣ ಬಳಿಯುವಂತೆ ಆದೇಶಿಸಿದ್ದರು. ಇದರ ಬೆನ್ನಲ್ಲೇ ಈಗ ಮಹಾತ್ಮ ಗಾಂಧಿ ಪ್ರತಿಮೆಗೂ ಕೇಸರಿ ಬಣ್ಣ ಬಳಿಯಲಾಗಿದೆ. ಶಹಜನ್​ಪುರ ಜಿಲ್ಲೆಯ ಢಾಕಾ ಗಂ​ಶ್ಯಾಂಪುರದಲ್ಲಿರುವ ಗಾಂಧಿ ಪ್ರತಿಮೆಗೆ ಸರ್ಕಾರದ ಆದೇಶವೇ ಇಲ್ಲದಿದ್ರೂ ಕೇಸರಿ ಬಣ್ಣ ಬಳಿಯಲಾಗಿದೆ.

ಇಲ್ಲಿನ ಸರ್ಕಾರಿ ಶಾಲೆ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಕೇಸರಿ ಬಣ್ಣ ಬಳಿದಿದ್ದಾರೆ. ಇದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಇದು ಬಿಜೆಪಿ ಕಾರ್ಯಕರ್ತರ ಕೃತ್ಯ ಅಂತ ಕಾಂಗ್ರೆಸ್ ಆರೋಪಿಸಿದೆ. ಇನ್ನು, ಈ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್ ತನಿಖೆಗೆ ಆದೇಶಿಸಿದ್ದು, ಉಪವಿಭಾಗದ ಮ್ಯಾಜಿಸ್ಟ್ರೇಟ್ ಇದರ ನೇತೃತ್ವ ವಹಿಸುವಂತೆ ಸೂಚಿಸಿದೆ.

ಆದ್ರೆ, ಜಿಲ್ಲಾಡಳಿತ ಮಾತ್ರ ಇದು ಕೇಸರಿ ಬಣ್ಣವಲ್ಲ, ತೆಳು ಹಳದಿ ಬಣ್ಣ ಅಂತ ಹೇಳಿದೆ. ಎರಡು ವರ್ಷಗಳ ಹಿಂದೆ ಶಾಲೆಯ ಮುಖ್ಯೋಪಾಧ್ಯಾಯರು ಪ್ರತಿಮೆಯ ದುರಸ್ಥಿ ಹಾಗೂ ಬಣ್ಣ ಬಳಿಯುವುದಕ್ಕೆ ಆದೇಶಿಸಿದ್ದರು. ಆಗ ಅದಕ್ಕೆ ತೆಳು ಹಳದಿ ಬಣ್ಣ ಹಚ್ಚಲಾಗಿತ್ತು ಅಂತ ಹೇಳಿದೆ. ಆದ್ರೆ ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ಎರಡು ವರ್ಷಗಳ ಹಿಂದೆಯೇ ನಡೆದಿದ್ದ ಘಟನೆಯಾಗಿದ್ರೆ ಈ ಮೊದಲೇ ಇದು ಬೆಳಕಿಗೆ ಬರಬೇಕಿತ್ತಲ್ಲಾ ಅಂತ ಪ್ರಶ್ನಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

10 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago