ಬೆಂಗಳೂರು: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶದ (ಯುಪಿ) ಬಿಜೆಪಿಯು ಕುಸಿಯಲಿದೆ ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ಮೊಯ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಜನರು ಪ್ರಿಯಾಂಕಾಗೆ ಮುಖ್ಯಮಂತ್ರಿ ಆದಿತ್ಯನಾಥ ಅವರಿಗಿಂತಲೂ ಹೆಚ್ಚಿನ ಆದ್ಯತೆ ನೀಡಲಿದ್ದಾರೆʼ ಎಂದು ಅಭಿಪ್ರಾಯಪಟ್ಟಿದ್ದಾರೆ.
ʼಉತ್ತರ ಪ್ರದೇಶದಲ್ಲಿ ಬಲಿಷ್ಠವಾಗಿರುವುದಾಗಿ ಬಿಜೆಪಿ ಭಾವಿಸಿದೆ. ಆದರೆ, ನೋಟುರದ್ದತಿ ಮತ್ತು ಜಿಎಸ್ಟಿ ಜಾರಿಯಂತಹ ಕೇಂದ್ರ ಸರ್ಕಾರದ ಯೋಜನೆಗಳಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇದರಿಂದಾಗಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಇಸ್ಪೀಟ್ ಕಾರ್ಡ್ಗಳ ಮನೆಯಂತೆ ಮುರಿದುಬೀಳಲಿದೆʼ ಎಂದಿದ್ದಾರೆ.
ʼಕೇವಲ ಘೋಷಣೆಗಳಿಂದ ಜನರನ್ನು ಸೆಳೆಯಲು ಅಥವಾ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಆ ಕಾರ್ಯವನ್ನು ಒಮ್ಮೆ ಮಾಡಬಹುದು. ಯಾವಾಗಲೂ ಅಲ್ಲʼ ಎಂದೂ ತಿವಿದಿದ್ದಾರೆ.
ಮುಂದುವರಿದು, ʼಪ್ರಿಯಾಂಕಾ ಗಾಂಧಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜನರು ಪ್ರಿಯಾಂಕಾರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಛಾಯೆಯನ್ನು ಕಾಣುತ್ತಿದ್ದಾರೆ. ನೀವು ಆದಿತ್ಯನಾಥ ಮತ್ತು ಪ್ರಿಯಾಂಕಾರನ್ನು ಹೋಲಿಸಿ ನೋಡಿದರೆ, ಯುಪಿ ಜನರು ಖಂಡಿತ ಪ್ರಿಯಾಂಕಾ ಮತ್ತು ಕಾಂಗ್ರೆಸ್ಗೆ ಆದ್ಯತೆ ನೀಡಲಿದ್ದಾರೆʼ ಎಂದಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…