ಬೆಂಗಳೂರು: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶದ (ಯುಪಿ) ಬಿಜೆಪಿಯು ಕುಸಿಯಲಿದೆ ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ಮೊಯ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಜನರು ಪ್ರಿಯಾಂಕಾಗೆ ಮುಖ್ಯಮಂತ್ರಿ ಆದಿತ್ಯನಾಥ ಅವರಿಗಿಂತಲೂ ಹೆಚ್ಚಿನ ಆದ್ಯತೆ ನೀಡಲಿದ್ದಾರೆʼ ಎಂದು ಅಭಿಪ್ರಾಯಪಟ್ಟಿದ್ದಾರೆ.
ʼಉತ್ತರ ಪ್ರದೇಶದಲ್ಲಿ ಬಲಿಷ್ಠವಾಗಿರುವುದಾಗಿ ಬಿಜೆಪಿ ಭಾವಿಸಿದೆ. ಆದರೆ, ನೋಟುರದ್ದತಿ ಮತ್ತು ಜಿಎಸ್ಟಿ ಜಾರಿಯಂತಹ ಕೇಂದ್ರ ಸರ್ಕಾರದ ಯೋಜನೆಗಳಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇದರಿಂದಾಗಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಇಸ್ಪೀಟ್ ಕಾರ್ಡ್ಗಳ ಮನೆಯಂತೆ ಮುರಿದುಬೀಳಲಿದೆʼ ಎಂದಿದ್ದಾರೆ.
ʼಕೇವಲ ಘೋಷಣೆಗಳಿಂದ ಜನರನ್ನು ಸೆಳೆಯಲು ಅಥವಾ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಆ ಕಾರ್ಯವನ್ನು ಒಮ್ಮೆ ಮಾಡಬಹುದು. ಯಾವಾಗಲೂ ಅಲ್ಲʼ ಎಂದೂ ತಿವಿದಿದ್ದಾರೆ.
ಮುಂದುವರಿದು, ʼಪ್ರಿಯಾಂಕಾ ಗಾಂಧಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜನರು ಪ್ರಿಯಾಂಕಾರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಛಾಯೆಯನ್ನು ಕಾಣುತ್ತಿದ್ದಾರೆ. ನೀವು ಆದಿತ್ಯನಾಥ ಮತ್ತು ಪ್ರಿಯಾಂಕಾರನ್ನು ಹೋಲಿಸಿ ನೋಡಿದರೆ, ಯುಪಿ ಜನರು ಖಂಡಿತ ಪ್ರಿಯಾಂಕಾ ಮತ್ತು ಕಾಂಗ್ರೆಸ್ಗೆ ಆದ್ಯತೆ ನೀಡಲಿದ್ದಾರೆʼ ಎಂದಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…