ರಂಗೇರಿದ ಶಿವಮೊಗ್ಗ ಲೋಕಸಭಾ ಕದನ : ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಕೋರ್ಟ್ ಮೊರೆ ಹೋದ ಈಶ್ವರಪ್ಪ – Vishwanews24
ರಂಗೇರಿದ ಶಿವಮೊಗ್ಗ ಲೋಕಸಭಾ ಕದನ : ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಕೋರ್ಟ್ ಮೊರೆ ಹೋದ ಈಶ್ವರಪ್ಪ
ಶಿವಮೊಗ್ಗ : ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಬಂಡಾಯದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ಇದರ ನಡುವೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸುವ ವಿಚಾರವಾಗಿ ಫೈಟ್ ಶುರುವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಕೆಎಸ್ ಈಶ್ವರಪ್ಪ ಅವರು ನರೇಂದ್ರ ಮೋದಿ ಭಾವಚಿತ್ರವನ್ನು ಪ್ರಚಾರದ ವೇಳೆ ಬಳಸಲು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಶಿವಮೊಗ್ಗದ ಕೋರ್ಟ್ನಲ್ಲಿ ಕೆವಿಯಟ್ ಅರ್ಜಿ ಸಲ್ಲಿಸಿರುವ ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಕೆಗೆ ಅನುಮತಿ ಕೇಳಿದ್ದಾರೆ. ಕೆಎಸ್ ಈಶ್ವರಪ್ಪ ಅವರು ತಮ್ಮ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಬಳಸುತ್ತಿದ್ದಾರೆ. ಇದಕ್ಕೆ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಕೆಎಸ್ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯಾ? ಮೋದಿ ಭಾವಚಿತ್ರವನ್ನು ಯಾರಾದರೂ ಬಳಸಬಹುದು ಎಂದು ಹೇಳಿದ್ದರು.
ದ.ಕನ್ನಡದಲ್ಲಿ ಮತ್ತೆ 6 ಮಂದಿ ಶಸ್ತ್ರಸಜ್ಜಿತ ನಕ್ಸಲರ ತಂಡ ಪ್ರತ್ಯಕ್ಷ ..! Vishwanews24
ಇದರ ಬೆನ್ನಲ್ಲಿಯೇ ಎಚ್ಚರಿಕೆ ಹೆಜ್ಜೆಯಿಟ್ಟಿರುವ ಕೆಎಸ್ ಈಶ್ವರಪ್ಪ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೊರೆ ಹೋಗಿದ್ದು, ಶುಕ್ರವಾರ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪುತ್ರ ಕಾಂತೇಶ್ಗೆ ಹಾವೇರಿ ಬಿಜೆಪಿ ಟಿಕೆಟ್ ನೀಡದ್ದರಿಂದ ಬಂಡಾಯವೆದ್ದಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಎದುರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಪ್ರಚಾರದಲ್ಲಿ ಬಿಜೆಪಿ ಚಿಹ್ನೆ ಹೊರತುಪಡಿಸಿ ಮೋದಿ ಭಾವಚಿತ್ರವನ್ನು ಈಶ್ವರಪ್ಪ ಬಳಸುತ್ತಿದ್ದಾರೆ.
ಕಡಬ: ಎದೆಹಾಲು ಉಣಿಸುವ ವೇಳೆ ಮಗು ಆಕಸ್ಮಿಕ ಸಾವು: ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆ – Vishwanews24
