Featured

ರಂಗೇರಿದ ಶಿವಮೊಗ್ಗ ಲೋಕಸಭಾ ಕದನ : ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಕೋರ್ಟ್‌ ಮೊರೆ ಹೋದ ಈಶ್ವರಪ್ಪ – Vishwanews24

ರಂಗೇರಿದ ಶಿವಮೊಗ್ಗ ಲೋಕಸಭಾ ಕದನ : ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಕೋರ್ಟ್‌ ಮೊರೆ ಹೋದ ಈಶ್ವರಪ್ಪ

ಶಿವಮೊಗ್ಗ : ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಬಂಡಾಯದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ಇದರ ನಡುವೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸುವ ವಿಚಾರವಾಗಿ ಫೈಟ್‌ ಶುರುವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಕೆಎಸ್‌ ಈಶ್ವರಪ್ಪ ಅವರು ನರೇಂದ್ರ ಮೋದಿ ಭಾವಚಿತ್ರವನ್ನು ಪ್ರಚಾರದ ವೇಳೆ ಬಳಸಲು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಶಿವಮೊಗ್ಗದ ಕೋರ್ಟ್‌ನಲ್ಲಿ ಕೆವಿಯಟ್‌ ಅರ್ಜಿ ಸಲ್ಲಿಸಿರುವ ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಕೆಗೆ ಅನುಮತಿ ಕೇಳಿದ್ದಾರೆ. ಕೆಎಸ್‌ ಈಶ್ವರಪ್ಪ ಅವರು ತಮ್ಮ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಬಳಸುತ್ತಿದ್ದಾರೆ. ಇದಕ್ಕೆ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಕೆಎಸ್‌ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯಾ? ಮೋದಿ ಭಾವಚಿತ್ರವನ್ನು ಯಾರಾದರೂ ಬಳಸಬಹುದು ಎಂದು ಹೇಳಿದ್ದರು.

ಇದರ ಬೆನ್ನಲ್ಲಿಯೇ ಎಚ್ಚರಿಕೆ ಹೆಜ್ಜೆಯಿಟ್ಟಿರುವ ಕೆಎಸ್‌ ಈಶ್ವರಪ್ಪ ಮೋದಿ ಫೋಟೋ ಬಳಕೆಗಾಗಿ ಕೋರ್ಟ್‌ ಮೊರೆ ಹೋಗಿದ್ದು, ಶುಕ್ರವಾರ ಕೆವಿಯಟ್‌ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಬಿಜೆಪಿ ಟಿಕೆಟ್‌ ನೀಡದ್ದರಿಂದ ಬಂಡಾಯವೆದ್ದಿರುವ ಕೆಎಸ್‌ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಎದುರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಪ್ರಚಾರದಲ್ಲಿ ಬಿಜೆಪಿ ಚಿಹ್ನೆ ಹೊರತುಪಡಿಸಿ ಮೋದಿ ಭಾವಚಿತ್ರವನ್ನು ಈಶ್ವರಪ್ಪ ಬಳಸುತ್ತಿದ್ದಾರೆ.

 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

20 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

22 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

22 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago