ಬೆಂಗಳೂರು: ರಂಜಾನ್ ಸಮಯದಲ್ಲಿ ಉಪವಾಸ ತೊರೆಯಲು ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಸಮಯದಲ್ಲಿ ಒಂದು ಗಂಟೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್ ಅಹ್ಮದ್ ಮತ್ತು ನಜೀರ್ ಅಹ್ಮದ್ ಪತ್ರ ಬರೆದಿದ್ದಾರೆ. ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ರಂಜಾನ್ ಉಪವಾಸ ತೊರೆಯಲು ಅನುಕೂಲವಾಗುವಂತೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ ಅಲ್ಲಿನ ಸರ್ಕಾರಗಳು ವಿನಾಯಿತಿ ನೀಡುತ್ತಿವೆ. ಅದೇರೀತಿ ರಾಜ್ಯದಲ್ಲೂ ಕೂಡ ವಿನಾಯಿತಿ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.
ಪತ್ರದಲ್ಲಿ ಏನಿದೆ?
“ರಂಜಾನ್ ತಿಂಗಳು ಸಮೀಸುತ್ತಿದ್ದು, ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ ಸರ್ಕಾರವು ರಂಜಾನ್ ತಿಂಗಳಲ್ಲಿ ಮುಸ್ಲಿಂ ಬಾಂಧವರು ಒಂದು ತಿಂಗಳು ಉಪವಾಸ ಇರುತ್ತಾರೆ. ಹೀಗಾಗಿ, ಅಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸಗಳಲ್ಲಿ ಉಪವಾಸ ಬಿಡಲು (ಇಪ್ತಿಯಾರ್) ಅನುಮತಿ ನೀಡಲಾಗಿದೆ.”
“ಆದುದರಿಂದ ದಯಮಾಡಿ ತಾವು ನಮ್ಮ ಕರ್ನಾಟಕದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸದಲ್ಲಿ ಉಪವಾಸ ಬಿಡಲು (ಇಪ್ತಿಯಾರ್) ಅನುಮತಿ ನೀಡುವಂತೆ ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ” ಎಂದು ಪತ್ರದಲ್ಲಿ ಬರೆಯಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…