ಚಿಕ್ಕಮಗಳೂರು: ವಿನಯ್ ಗುರೂಜಿ ಪಂಚಪೀಠಗಳಲ್ಲಿ ಮೊದಲನೇ ಪೀಠವಾದ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಪಾದಪೂಜೆ ಮಾಡಿದ್ದಾರೆ.
ವಿನಯ್ಗುರೂಜಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಗ್ರಾಮದ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ.
ಇದೇ ಮೊದಲ ಬಾರಿಗೆ ವಿನಯ್ ಗುರೂಜಿ ಪಂಚಪೀಠಗಳಲ್ಲಿ ಮೊದಲನೇ ಪೀಠವಾದ ರಂಭಾಪುರಿ ಪೀಠಕ್ಕೆ ಗುರುವಾರ ಭೇಟಿ ನೀಡಿದ್ದರು. ಇದೇ ವೇಳೆ, ರಂಭಾಪುರಿ ಶ್ರೀಗಳಾದ ಶ್ರೀ ಪ್ರಸನ್ನ ವೀರಸೋಮೇಶ್ವರ ಶಿವಚಾರ್ಯ ಜಗದ್ಗುರುಗಳ ಪಾದಪೂಜೆ ಮಾಡಿ ಪುಷ್ಪಾರ್ಚನೆ ಗೈದಿದ್ದಾರೆ. ಅವಧೂತ ವಿನಯ್ ಗುರೂಜಿ ಇತ್ತೀಚಿಗೆ ಕಾಶಿಗೆ ಹೋಗಿ ಬಂದಿದ್ದರು. ಆಗ ಅಲ್ಲಿಂದ ಶ್ರೀಚಕ್ರ ತಂದಿದ್ದರು. ಅದನ್ನ ರಂಭಾಪುರಿ ಪೀಠಕ್ಕೆ ನೀಡಬೇಕೆಂದು ವಿನಯ್ ಗುರೂಜಿಗೆ ಅವರ ಗುರುಗಳ ಆಜ್ಞೆಯಾಗಿತ್ತಂತೆ. ಆ ಹಿನ್ನೆಲೆ ಇಂದು ರಂಭಾಪುರಿ ಪೀಠಕ್ಕೆ ಬಂದ ವಿನಯ್ ಗುರೂಜಿ ರಂಭಾಪುರಿ ಶ್ರೀಗಳಿಗೆ ಪಾದಪೂಜೆ ಮಾಡಿ, ಪುಷ್ಪಾರ್ಚನೆ ಮಾಡಿದ್ದಾರೆ.
ಪ್ರತಿಮೆ ಕೆಳಗೆ ಶ್ರೀಚಕ್ರ ಇಡುವಂತೆ ಮನವಿ :
ಇತ್ತೀಚೆಗೆ ಕಾಶಿಗೆ ಹೋಗಿದ್ದ ವಿನಯ್ ಗುರೂಜಿ ಎರಡು ಶ್ರೀಚಕ್ರಗಳನ್ನ ತಂದಿದ್ದರು. ಅದರಲ್ಲಿ ಒಂದನ್ನ ರಂಭಾಪುರಿ ಪೀಠಕ್ಕೆ ನೀಡಿದ್ದು, ಶೀಘ್ರದಲ್ಲೇ ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ರೇಣುಕಾಚಾರ್ಯರ 61 ಅಡಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಲಿದೆ. ಆ ಪ್ರತಿಮೆ ಕೆಳಗೆ ಶ್ರೀಚಕ್ರ ಇಡುವಂತೆ ವಿನಯ್ ಗುರೂಜಿ ರಂಭಾಪುರಿ ಶ್ರೀಗಳಿಗೆ ಮನವಿ ಮಾಡಿದ್ದಾರೆ.
ಇನ್ನು ಗುರುವಾರ ಬೆಳಗ್ಗೆ ರಂಭಾಪುರಿ ಪೀಠಕ್ಕೆ ಬಂದ ವಿನಯ್ ಗುರೂಜಿ, ಕ್ಷೇತ್ರನಾಥ ವೀರಭದ್ರ ಸ್ವಾಮಿಗೆ ತಾವೇ ಪೂಜೆ ಮಾಡಿ ದರ್ಶನ ಪಡೆದಿದ್ದಾರೆ. ಮಠದ ಆವರಣದಲ್ಲಿ ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಇದ್ದು, ರಂಭಾಪುರಿ ಶ್ರೀಗಳ ಜೊತೆಯೂ ದೀರ್ಘ ಸಮಾಲೋಚನೆ ನಡೆಸಿದ್ದಾರೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…