ಕಟಪಾಡಿ: ರಕ್ತನಿಧಿ ಉಡುಪಿ ಜಿಲ್ಲಾ ಆಸ್ಪತ್ರೆ ಉಡುಪಿ,ಕುರ್ಕಾಲು ಯುವಕ ಮಂಡಲ ಹಾಗೂ ಲಯನ್ಸ್ ಕ್ಲಬ್ ಸುಭಾಸ್ ನಗರ ಹಾಗೂ ವಿವಿಧ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಆದಿತ್ಯವಾರ ಕುರ್ಕಾಲು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿ“ಕೊರೋನಾ ಎಂಬ ಮಹಮಾರಿ ಇಡೀ ಜಗತ್ತನ್ನು ಆವರಿಸಿರುವ ಸಮಯದಲ್ಲಿ ಯುವಕರ ತಂಡ ಕೊರೋನಾ ವಾರಿಯರ್ಸ್ ರೀತಿಯಲ್ಲಿ ರಕ್ತದಾನ ಮಾಡುವ ಮೂಲಕ ದೇವರಿಗೆ ಪ್ರೀತಿ ಆಗುವ ರೀತಿಯಲ್ಲಿ ಮಹತ್ಕಾರ್ಯ ಮಾಡುತ್ತಿರುವುದು ಶ್ಲಾಘನೀಯವಾಗಿದೆ,ಲಾಕ್-ಡೌನ್ ಸಮಯದಲ್ಲಿ ಪ್ರೀತಿ ವಿಶ್ವಾಸ ಹೆಚ್ವಾಗಿದೆ ಒಬ್ಬರಿಗೊಬ್ಬರು ಪರಸ್ಪರ ಸಹಕರಿಸುವ ಮೂಲಕ ಮಾನವೀಯ ಕಾರ್ಯ ಮಾಡುತ್ತಿರುವುದು ಅಭಿನಂದನನೀಯ ಎಂದರು.”
ಡಾ.ವೀಣಾ ಮಾತಾಡಿ ” ಉಡುಪಿ ಜಿಲ್ಲೆಯಲ್ಲಿ ರಕ್ತದ ಕೊರತೆ ಇದೆ ಎಂದ ಸಂಧರ್ಭದಲ್ಲಿ ಉಡುಪಿಯ ಜನತೆ ಮುಂದೆ ಬಂದು ರಕ್ತದಾನ ಮಾಡುವ ಕಾರ್ಯ ಮಾಡಿದ್ದು ಇದೇ ವಿಚಾರವಾಗಿ ಕುರ್ಕಾಲು ಭಾಗದ ಯುವಕರು ಕೂಡ ಕೈ ಜೋಡಿಸಿದ್ದು ಅಭಿನಂದನೆ ಎಂದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಸುಭಾಸ್ ನಗರ ಅಧ್ಯಕ್ಷ ದೇವುಪುತ್ರ ಕೋಟ್ಯಾನ್ ,ದಿನಕರ ಶೆಟ್ಟಿ ಗೌರವಧ್ಯಕ್ಷರು ಯುವಕ ಮಂಡಲ ಕುರ್ಕಾಲು, ಉಡುಪಿ ರಕ್ತನಿಧಿ ಮುಖ್ಯಸ್ಥೆ ಡಾ.ವೀಣಾ,ಕುರ್ಕಾಲು ಯುವಕ ಮಂಡಲ ಅಧ್ಯಕ್ಷ ಪ್ರವೀಣ್ ಕುರ್ಕಾಲು,ಉಪನ್ಯಾಸಕ ವಿಶಾಕ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
ವಿಶ್ವನ್ಯೂಸ್24:9343846360
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…