Featured

ರಕ್ತದಾನ ಶ್ರೇಷ್ಠ ದಾನ: ಜಯ ಸಿ ಕೋಟ್ಯಾನ್, ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ರಕ್ತದಾನ ಶಿಬಿರ ಚಾಲನೆ.

ಕಾಪು: ಭಾರತದಲ್ಲಿ ರಕ್ತದ ಅವಶ್ಯಕತೆ ಬಹಳಷ್ಟಿದೆ. ರಕ್ತವನ್ನು ಹೆಚ್ಚು ಹೆಚ್ಚು ದಾನ ಮಾಡಬೇಕಿದೆ. ಆರೋಗ್ಯ ತಪಾಸಣೆ, ರಕ್ತದಾನ ಶಿಬಿರದಂತಹ ಕಾರ್ಯಕ್ರಮಗಳ ಮೂಲಕವಾಗಿ ಸಮಾಜದ ಅನೇಕರ ಪ್ರಾಣ ರಕ್ಷಣೆ ಮಾಡಲು ಸಾಧ್ಯವಿದೆ. ಯುವಕರು ಸಂಘಟನಾತ್ಮಕವಾಗಿ ನಡೆಸುವ ರಕ್ತದಾನ ಶಿಬಿರಗಳು ಸಮಾಜಮುಖಿ ಕಾರ್ಯಕ್ರಮಗಳಾಗಿದ್ದು ಇದಕ್ಕೆ ಸಮಾಜದಿಂದಲೂ ಉತ್ತಮ ಸ್ಪಂದನೆ ಹಾಗೂ ಸಹಕಾರ ದೊರಕುತ್ತದೆ ಎಂದು ಕರ್ನಾಟಕ ಅಂಬಿಗರ ಚೌಡಯ್ಯ ಮಹಾಸಭಾದ ಕಾರ್ಯಧ್ಯಕ್ಷ ಜಯ.ಸಿ,ಕೊಟ್ಯಾನ್ ಹೇಳಿದರು.

 

ಮೂಳೂರು ಫೀಶರಿಸ್ ರಸ್ತೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ನೇತೃತ್ವದಲ್ಲಿ , ಕೆ.ವಮ್.ಸಿ ಕಮ್ಯೂನಿಟಿ ವಿಭಾಗ ಮಣಿಪಾಲ, ಮೊಗವೀರ ಯುವ ಸಂಘಟನೆ ಉಡುಪಿ,ಕೆ.ಎಮ್.ಸಿ ರಕ್ತನಿಧಿ ಕೇಂದ್ರ ಹಾಗೂ ಜಿಲ್ಲಾಡಳಿತ ಉಡುಪಿ ಹಾಗೂ ಕೆ,ಎಮ್.ಸಿ ದಂತ ವೈದ್ಯಕೀಯ ಕಾಲೇಜು ಸಹಯೋಗದಲ್ಲಿ ಎ. 1 ರಂದು ನಡೆದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ , ಉಚಿತ ಹೃದ್ರೋಗ ತಪಾಸಣೆ, ಉಚಿತ ಮಧುಮೇಹ, ರಕ್ತದೊತ್ತಡ ಪರೀಕ್ಷೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದರು.
ಮಣಿಪಾಲ ರಕ್ತ ನಿಧಿ ಕೇಂದ್ರ ವಿಭಾಗದ ಡಾ| ಮನೀಷ್ ಮಾತಾನಾಡಿ ರಕ್ತದಾನ ಶಿಬಿರದ ಹೆಚ್ಚಿ ರಕ್ತ ತೆಗೆಯುತ್ತಾರೆಂಬ ತಪ್ಪು ಕಲ್ಪನೆಯಿದೆ. ದೇಹದಲ್ಲಿ ಉತ್ಪತಿಯಾಗುವ ಶೇ. 8 ರಷ್ಟು ಭಾಗ ರಕ್ತವನ್ನು ಮಾತ್ರ ದಾನ ರೂಪದಲ್ಲಿ ತೆಗೆಯಲಾಗುತ್ತದೆ ಮತ್ತು ಇದರಿಂದ ಜೀವಕ್ಕೆ ಯಾವುದೇ ರೀತಿಯ ಹಾನಿಯಿಲ್ಲ. ಭಾರತದಲ್ಲಿ ಶೇ.40 ಪಾಲು ಮಾತ್ರ ರಕ್ತ ಲಭ್ಯತೆ ಇದ್ದು ಇನ್ನುಳಿದಂತೆ ಶೇ.60 ರಷ್ಟು ರಕ್ತದ ಕೊರತೆ ಕಂಡು ಬರುತ್ತಿದೆ ಎಂದರು.

ಕಳೆದ ಬಾರಿ 150 ಕ್ಕೂ ಅಧಿಕ ಯೂನಿಟ್ ರಕ್ತ ಸಂಗ್ರವಾಗಿದ್ದು 300 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಆರೋಗ್ಯ ತಪಸಣಾ ಶಿಬಿರದಲ್ಲಿ ಭಾಗವಹಿಸಿದ್ದರು.

ಮುಖ್ಯ ಅತಿಥಿಯಾಗಿ ಮೊಗವೀರ ಯುವ ಸಂಘಟನೆ ದೊಡ್ಡಣಗುಡ್ಡೆಯ ಗೌರವ ಸಲಹೆಗಾರ ಸತೀಶ್ ಪುತ್ರನ್,ಕಮ್ಯೂನಿಟಿ ಮೆಡಿಸಿನ್ ವಿಭಾಗ ಅಸಿಸ್ಟೆಂಟ್ ಪ್ರೋಫೆಸರ್ ಡಾ| ದಿವ್ಯ ಪೈ, ಸಮುದಾಯ ದಂತ ವೈದ್ಯ ಡಾ|ನಿಶೂ ಸಿಂಗ್ಲೂ , ಮೂಳೂರು ಮೊಗವೀರ ಮಹಾಸಭಾದ ಅಧ್ಯಕ್ಷ ವಾಸು ಕಾಂಚನ್, ಟ್ರಸ್ಟ್ ನ ಅಧ್ಯಕ್ಷ ಚಂದ್ರಕಾಂತ್ ಕೆ. ಮೆಂಡನ್ ,ಗೌರವ ಸಲಹೆಗಾರ ಅಶೋಕ್ ಪುತ್ರನ್,ಧೀರಜ್ ಉಪಸ್ಥಿತರಿದ್ದರು.

ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ಸದಸ್ಯ ಸಂತೋಷ್ ಪುತ್ರನ್ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ವಿಪಿನ್ ಕಾಂಚನ್ ವಂದಿಸಿ ಕಾರ್ಯ ಕ್ರಮ ನಿರೂಪಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

24 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

24 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago