ಕಾಪು: ಭಾರತದಲ್ಲಿ ರಕ್ತದ ಅವಶ್ಯಕತೆ ಬಹಳಷ್ಟಿದೆ. ರಕ್ತವನ್ನು ಹೆಚ್ಚು ಹೆಚ್ಚು ದಾನ ಮಾಡಬೇಕಿದೆ. ಆರೋಗ್ಯ ತಪಾಸಣೆ, ರಕ್ತದಾನ ಶಿಬಿರದಂತಹ ಕಾರ್ಯಕ್ರಮಗಳ ಮೂಲಕವಾಗಿ ಸಮಾಜದ ಅನೇಕರ ಪ್ರಾಣ ರಕ್ಷಣೆ ಮಾಡಲು ಸಾಧ್ಯವಿದೆ. ಯುವಕರು ಸಂಘಟನಾತ್ಮಕವಾಗಿ ನಡೆಸುವ ರಕ್ತದಾನ ಶಿಬಿರಗಳು ಸಮಾಜಮುಖಿ ಕಾರ್ಯಕ್ರಮಗಳಾಗಿದ್ದು ಇದಕ್ಕೆ ಸಮಾಜದಿಂದಲೂ ಉತ್ತಮ ಸ್ಪಂದನೆ ಹಾಗೂ ಸಹಕಾರ ದೊರಕುತ್ತದೆ ಎಂದು ಕರ್ನಾಟಕ ಅಂಬಿಗರ ಚೌಡಯ್ಯ ಮಹಾಸಭಾದ ಕಾರ್ಯಧ್ಯಕ್ಷ ಜಯ.ಸಿ,ಕೊಟ್ಯಾನ್ ಹೇಳಿದರು.
ಮೂಳೂರು ಫೀಶರಿಸ್ ರಸ್ತೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ನೇತೃತ್ವದಲ್ಲಿ , ಕೆ.ವಮ್.ಸಿ ಕಮ್ಯೂನಿಟಿ ವಿಭಾಗ ಮಣಿಪಾಲ, ಮೊಗವೀರ ಯುವ ಸಂಘಟನೆ ಉಡುಪಿ,ಕೆ.ಎಮ್.ಸಿ ರಕ್ತನಿಧಿ ಕೇಂದ್ರ ಹಾಗೂ ಜಿಲ್ಲಾಡಳಿತ ಉಡುಪಿ ಹಾಗೂ ಕೆ,ಎಮ್.ಸಿ ದಂತ ವೈದ್ಯಕೀಯ ಕಾಲೇಜು ಸಹಯೋಗದಲ್ಲಿ ಎ. 1 ರಂದು ನಡೆದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ , ಉಚಿತ ಹೃದ್ರೋಗ ತಪಾಸಣೆ, ಉಚಿತ ಮಧುಮೇಹ, ರಕ್ತದೊತ್ತಡ ಪರೀಕ್ಷೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದರು.
ಮಣಿಪಾಲ ರಕ್ತ ನಿಧಿ ಕೇಂದ್ರ ವಿಭಾಗದ ಡಾ| ಮನೀಷ್ ಮಾತಾನಾಡಿ ರಕ್ತದಾನ ಶಿಬಿರದ ಹೆಚ್ಚಿ ರಕ್ತ ತೆಗೆಯುತ್ತಾರೆಂಬ ತಪ್ಪು ಕಲ್ಪನೆಯಿದೆ. ದೇಹದಲ್ಲಿ ಉತ್ಪತಿಯಾಗುವ ಶೇ. 8 ರಷ್ಟು ಭಾಗ ರಕ್ತವನ್ನು ಮಾತ್ರ ದಾನ ರೂಪದಲ್ಲಿ ತೆಗೆಯಲಾಗುತ್ತದೆ ಮತ್ತು ಇದರಿಂದ ಜೀವಕ್ಕೆ ಯಾವುದೇ ರೀತಿಯ ಹಾನಿಯಿಲ್ಲ. ಭಾರತದಲ್ಲಿ ಶೇ.40 ಪಾಲು ಮಾತ್ರ ರಕ್ತ ಲಭ್ಯತೆ ಇದ್ದು ಇನ್ನುಳಿದಂತೆ ಶೇ.60 ರಷ್ಟು ರಕ್ತದ ಕೊರತೆ ಕಂಡು ಬರುತ್ತಿದೆ ಎಂದರು.
ಕಳೆದ ಬಾರಿ 150 ಕ್ಕೂ ಅಧಿಕ ಯೂನಿಟ್ ರಕ್ತ ಸಂಗ್ರವಾಗಿದ್ದು 300 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಆರೋಗ್ಯ ತಪಸಣಾ ಶಿಬಿರದಲ್ಲಿ ಭಾಗವಹಿಸಿದ್ದರು.
ಮುಖ್ಯ ಅತಿಥಿಯಾಗಿ ಮೊಗವೀರ ಯುವ ಸಂಘಟನೆ ದೊಡ್ಡಣಗುಡ್ಡೆಯ ಗೌರವ ಸಲಹೆಗಾರ ಸತೀಶ್ ಪುತ್ರನ್,ಕಮ್ಯೂನಿಟಿ ಮೆಡಿಸಿನ್ ವಿಭಾಗ ಅಸಿಸ್ಟೆಂಟ್ ಪ್ರೋಫೆಸರ್ ಡಾ| ದಿವ್ಯ ಪೈ, ಸಮುದಾಯ ದಂತ ವೈದ್ಯ ಡಾ|ನಿಶೂ ಸಿಂಗ್ಲೂ , ಮೂಳೂರು ಮೊಗವೀರ ಮಹಾಸಭಾದ ಅಧ್ಯಕ್ಷ ವಾಸು ಕಾಂಚನ್, ಟ್ರಸ್ಟ್ ನ ಅಧ್ಯಕ್ಷ ಚಂದ್ರಕಾಂತ್ ಕೆ. ಮೆಂಡನ್ ,ಗೌರವ ಸಲಹೆಗಾರ ಅಶೋಕ್ ಪುತ್ರನ್,ಧೀರಜ್ ಉಪಸ್ಥಿತರಿದ್ದರು.
ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ಸದಸ್ಯ ಸಂತೋಷ್ ಪುತ್ರನ್ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ವಿಪಿನ್ ಕಾಂಚನ್ ವಂದಿಸಿ ಕಾರ್ಯ ಕ್ರಮ ನಿರೂಪಿಸಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…