Featured

ರಕ್ತದ ಕಣಕಣದಲ್ಲೂ ಬಿಜೆಪಿ ಇದೆ , ನಾನು ನನ್ನ ಮನೆಗೆ ವಾಪಸ್ ಬಂದಿದ್ದೇನೆ : ಶಾಸಕ ಜನಾರ್ದನ ರೆಡ್ಡಿ – Vishwanews24

ರಕ್ತದ ಕಣಕಣದಲ್ಲೂ ಬಿಜೆಪಿ ಇದೆ , ನಾನು ನನ್ನ ಮನೆಗೆ ವಾಪಸ್ ಬಂದಿದ್ದೇನೆ : ಶಾಸಕ ಜನಾರ್ದನ ರೆಡ್ಡಿ

ಬೆಂಗಳೂರು: ಕೆಆರ್‌ಪಿಪಿ ಪಕ್ಷದ ಸ್ಥಾಪಕ ಶಾಸಕ ಜನಾರ್ದನ ರೆಡ್ಡಿ  ಅವರಿಂದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೆಆರ್‌ಪಿಪಿ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನ ಮಾಡಿದ್ದೇನೆ. ನನ್ನ ಪತ್ನಿ ಹಾಗೂ ನನ್ನ ಕಷ್ಟದ ಕಾಲದಲ್ಲಿ ಜೊತೆಗೆ ನಿಂತ ಎಲ್ರೂ ಬಿಜೆಪಿ ಸೇರಿದ್ದೇವೆ. ನನ್ನ ಗೆಳೆಯ ಶ್ರೀರಾಮುಲು ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದು ಭಾವುಕರಾಗಿದ್ದಾರೆ.

ಮೋದಿಯವರ ಕೈ ಬಲಪಡಿಸುವ ದೃಷ್ಟಿಯಿಂದ ಅಮಿತ್ ಶಾ ಅವರು ದೆಹಲಿಗೆ ಆಹ್ವಾನಿಸಿದ್ದರು. ಬಾಹ್ಯ ಬೆಂಬಲ ಬೇಡ, ಪಕ್ಷಕ್ಕೆ ಸೇರುವಂತೆ ಪ್ರೀತಿಯಿಂದ ಆಹ್ವಾನ ನೀಡಿದರು. ಅದನ್ನು ಒಪ್ಪಿ ಬಿಜೆಪಿಗೆ ಮತ್ತೆ ಸೇರಿದ್ದೇನೆ ಎಂದಿದ್ದಾರೆ.

ಯಾವುದೇ ಷರತ್ತು ಹಾಕಿಲ್ಲ:
ಯಡಿಯೂರಪ್ಪ  ಅವರ ಬಗ್ಗೆ ಎರಡು ಮಾತಲ್ಲಿ ಹೇಳಲಾಗಲ್ಲ. ರಾಜ್ಯದಲ್ಲಿ ಬಿಜೆಪಿ ನೆಲೆಯೂರಲು ದೇವರು ಕಳಿಸಿದ ಅದ್ಭುತ ಸೃಷ್ಟಿ ಯಡಿಯೂರಪ್ಪ. ಅವರ ಜೊತೆ ಚಿಕ್ಕ ವಯಸ್ಸಲ್ಲೇ ಸೇರಿಕೊಂಡು ಪಕ್ಷ ಕಟ್ಟಿದ್ದು ನನ್ನ ಪೂರ್ವ ಜನ್ಮದ ಪುಣ್ಯ. ತಂದೆ-ಮಗನ ಜೊತೆಗೂಡಿ ಈಗ ಮತ್ತೆ ಪಕ್ಷದ ಕೆಲಸ ಮಾಡ್ತೀನಿ. ಇದು ಬಹಳ ಸಂತೋಷ ತಂದಿದೆ. ಯಾವುದೇ ಷರತ್ತು ಹಾಕಿಲ್ಲ, ಫಲಾಫೇಕ್ಷೆ ಬಯಸದೇ ಸೇರಿದ್ದೇನೆ ಎಂದು ಹೇಳಿದ್ದಾರೆ.

ತಾಯಿ ಮಡಿಲಿಗೆ ಸೇರಿದ್ದೇನೆ:
ಬಿಜೆಪಿ ನನಗೆ ಎಲ್ಲವೂ ಕೊಟ್ಟಿದೆ. ಅನೇಕ ಏಳು-ಬೀಳು ಕಂಡಿದ್ದೇನೆ, ಯಾವುದೇ ಜವಾಬ್ದಾರಿ ಕೊಟ್ಟರೂ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಕೆಲಸ ಮಾಡ್ತೇನೆ. ನಾನು ನನ್ನ ಮನೆಗೆ ವಾಪಸ್ ಬಂದಿದ್ದೇನೆ. ರಕ್ತದ ಕಣಕಣದಲ್ಲೂ ಬಿಜೆಪಿ ಇದೆ. ಯಾವುದೋ ಅನಿವಾರ್ಯ ಕಾರಣದಿಂದ ಪಕ್ಷ ಬಿಡಬೇಕಾಗಿತ್ತು. ಈಗ ನಾನು ಸ್ವಂತ ಮನೆಗೆ ಮರಳಿದ್ದೇನೆ, ತಾಯಿ ಮಡಿಲಿಗೆ ಸೇರಿದ್ದೇನೆ. ನಾನು-ರಾಮುಲು ಒಂದು ಕುಟುಂಬ, ಒಟ್ಟಿಗೇ ಇರ್ತೀವಿ. ಇದು ನನ್ನ ಪಕ್ಷ ಎಂದು ಬೀಗಿದ್ದಾರೆ

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

13 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

13 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

15 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

15 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

16 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

16 hours ago